ಸಿದ್ದರಾಮಯ್ಯನವರನ್ನು ಸೋಲಿಸಿದ್ದಕ್ಕೇ ಕೊಡಗಿನಲ್ಲಿ ಜಲಪ್ರಳಯ: ನಿರಂಜನಾನಂದಪುರಿ ಸ್ವಾಮೀಜಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಸೋಲಿಸಿದ್ದರ ಪರಿಣಾಮ ಕೊಡಗಿನಲ್ಲಿ ಜಲಪ್ರಳಯವಾಗಿದೆ ಎಂದು ಕನಕ ಪೀಠದ ನಿರಂಜನಾನಂದಪುರಿ ಸ್ವಾಮೀಜಿ ಅವರು ಹೇಳಿದ್ದಾರೆ.
ಸಿದ್ದರಾಮಯ್ಯ-ನಿರಂಜನಾನಂದಪುರಿ ಸ್ವಾಮೀಜಿ
ಸಿದ್ದರಾಮಯ್ಯ-ನಿರಂಜನಾನಂದಪುರಿ ಸ್ವಾಮೀಜಿ
Updated on
ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಸೋಲಿಸಿದ್ದರ ಪರಿಣಾಮ ಕೊಡಗಿನಲ್ಲಿ ಜಲಪ್ರಳಯವಾಗಿದೆ ಎಂದು ಕನಕ ಪೀಠದ ನಿರಂಜನಾನಂದಪುರಿ ಸ್ವಾಮೀಜಿ ಅವರು ಹೇಳಿದ್ದಾರೆ. 
ಮೈಸೂರಿನಲ್ಲಿ ಕನಕ ಭವನ ಉದ್ಘಾಟನೆ ವೇಳೆ ಮಾತನಾಡಿದ ಅವರು, ಹಾಲುಮತ ಸಮಾಜದ ನಾಯಕರು ಸಮಾಜದ ಅಭಿವೃದ್ಧಿ, ಏಳಿಗೆಗಾಗಿ ದುಡಿದರು. ಅವರಿಗೆ ಅನ್ಯಾಯವಾದ ಸಂದರ್ಭದಲ್ಲಿ ಪ್ರಕೃತಿ ಮುನಿಸಿಕೊಂಡು ತನ್ನ ಆರ್ಭಟ ಪ್ರದರ್ಶಿಸಿತ್ತು ಎಂದರು.
ಈ ವಿಷಯವನ್ನು ಅಂದೆ ನಾನು ಹೇಳಬೇಕೆಂದುಕೊಂಡಿದ್ದೆ ಆದರೆ ಆಗ ನನಗೆ ಸೂಕ್ತ ವೇದಿಕೆ ಸಿಕ್ಕಿರಲಿಲ್ಲ. ಇಂದು ನನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದೇನೆ. ಹೀಗಾಗಿ ಸಿದ್ದರಾಮಯ್ಯ ಸೇರಿ ನಮ್ಮ ಸಮಾಜದ ಯಾವುದೇ ನಾಯಕರ ಬಗ್ಗೆ ಹೀನಾಯವಾಗಿ ಮಾತನಾಡಬಾರದು ಎಂದು ಸ್ವಾಮೀಜಿಗಳು ಸಿದ್ದರಾಮಯ್ಯ ವಿರೋಧಿಗಳಿಗೆ ಸಂದೇಶ ರವಾನಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com