ಕಳೆದ ವರ್ಷ ಮೇ 11ರಂದು ರಾಷ್ಟ್ರೀಯ ಹಸಿರು ಪ್ರಾಧಿಕಾರ, ನಗರದ ಬೆಳ್ಳಂದೂರು, ಅಗರ ಮತ್ತು ವರ್ತೂರು ಕೆರೆಗಳ ಸ್ಥಿತಿಗತಿ ಬಗ್ಗೆ ಮತ್ತು ಅಲ್ಲಿ ಉಂಟಾಗಿರುವ ಹಾನಿ ಬಗ್ಗೆ ವರದಿ ಸಲ್ಲಿಸುವಂತೆ ಹಲವು ಉನ್ನತ ಮಟ್ಟದ ಅಧಿಕಾರಿಗಳನ್ನು ಒಳಗೊಂಡ ಸ್ವತಂತ್ರ ಆಯೋಗವನ್ನು ರಚಿಸುವಂತೆ ಆದೇಶಿಸಿತ್ತು. ಆಯೋಗದಲ್ಲಿ ಹಲವು ವಕೀಲರು, ಇಂಡಿಯನ್ ಇನ್ಸ್ ಟಿಟ್ಯೂಟ್ ಆಫ್ ಸೈನ್ಸ್ ನ ಪ್ರೊಫೆಸರ್, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಕೆರೆ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಇದ್ದರು.