ಈ ವಿಷಯ ನಿನ್ನೆ ಗುರುವಿನ ತಾಯಿ ಚಿಕ್ಕೋಳಮ್ಮ ಅವರಿಂದಲೇ ತಿಳಿದುಬಂತು. ಹುತಾತ್ಮ ಗುರುವಿನ ಅಂತ್ಯಸಂಸ್ಕಾರಕ್ಕೆ ಮುನ್ನ ಮಾಧ್ಯಮ ಪ್ರತಿನಿಧಿಗಳು ಅವರನ್ನು ಮಾತನಾಡಿಸಿದ ಸಂದರ್ಭದಲ್ಲಿ, ನನ್ನ ಮಗ ಕರ್ತವ್ಯದಲ್ಲಿರುವಾಗ ಮೃತಪಟ್ಟಿದ್ದರೆ ನಾನಿಂದು ಇಷ್ಟು ಅಳುತ್ತಿರಲಿಲ್ಲ. ಊರಿನಿಂದ ರಜೆ ಮುಗಿಸಿಕೊಂಡು ಹೋಗುವಾಗಲೇ ಪಾಪಿಗಳು ಕೊಂದು ಹಾಕಿದ್ದಾರೆ. ಆತ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ್ದಾನೆ, ಆ ಬಗ್ಗೆ ನನಗೆ ಹೆಮ್ಮೆಯಿದೆ ಎಂದರು.