ಬೆಂಗಳೂರು: ರಾಜ್ಯ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ವಿರುದ್ಧ ದಾಖಲಾದಐಪಿಸಿ, ಐ-ಟಿ ಆಕ್ಟ್ ಹಾಗೂ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿಯಲ್ಲಿನ ಪ್ರಕರಣವನ್ನು ಆದಾಯ ತೆರಿಗೆ ಇಲಾಖೆ ಮತ್ತು ಜಾರಿ ನಿರ್ದೇಶನಾಲಯ ರಾಜ್ಯ ಹೈಕೋರ್ಟ್ ನಲ್ಲಿ ಬಲವಾಗಿ ಸಮರ್ಥಿಸಿಕೊಂಡಿದೆ.ಇದಕ್ಕೆ ಮುನ್ನ ಡಿಕೆಶಿತಮ್ಮ ವಿರುದ್ಧ ಕೇಂದ್ರ ತನಿಖಾ ತಂಡಗಳು ಹೂಡಿರುವ ಕ್ರಿಮಿನಲ್ ಮೊಕದ್ದಮೆಗಳ ಸಿಂಧುತ್ವವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು.