ಏರೋ ಇಂಡಿಯಾದಲ್ಲಿ ಅಗ್ನಿ ಅವಘಡ: ರಕ್ಷಣಾ ಸಚಿವರಿಂದ ಪಾರ್ಕಿಂಗ್ ಸ್ಥಳ ಪರಿಶೀಲನೆ

: ಏರೋ ಇಂಡಿಯಾ 2019 ವೈಮಾನಿಕ ಪ್ರದರ್ಶನದ ಕಡೆಯ ದಿನವಾದ ಭಾನುವಾರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಮುನ್ನೂರು ಕಾರುಗಳು ಬೆಂಕಿಗಾಹುತಿಯಾಗಿ....
ಏರೋ ಇಂಡಿಯಾದಲ್ಲಿ ಅಗ್ನಿ ಅವಘಡ: ರಕ್ಷಣಾ ಸಚಿವರಿಂದ ಪಾರ್ಕಿಂಗ್ ಸ್ಥಳ ಪರಿಶೀಲನೆ
ಏರೋ ಇಂಡಿಯಾದಲ್ಲಿ ಅಗ್ನಿ ಅವಘಡ: ರಕ್ಷಣಾ ಸಚಿವರಿಂದ ಪಾರ್ಕಿಂಗ್ ಸ್ಥಳ ಪರಿಶೀಲನೆ
Updated on
ಬೆಂಗಳೂರು: ಏರೋ ಇಂಡಿಯಾ 2019  ವೈಮಾನಿಕ ಪ್ರದರ್ಶನದ ಕಡೆಯ ದಿನವಾದ ಭಾನುವಾರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಮುನ್ನೂರು ಕಾರುಗಳು ಬೆಂಕಿಗಾಹುತಿಯಾಗಿದ್ದ ಪಾರ್ಕಿಂಗ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿರುವ ಏರೋ ಇಂಡಿಯಾ - 2019ರ ಪ್ರದರ್ಶನದ ಪಾರ್ಕಿಂಗ್ ಸ್ಥಳದಲ್ಲಿ ಶನಿವಾರ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, 300ಕ್ಕೂ ಹೆಚ್ಚು ವಾಹನಗಳಿಗೆ ಸುಟ್ಟು ಕರಕಲಾಗಿತ್ತು.
ಭಾನುವಾರ ಸಹ ಏರ್ ಶೋ ಮುಂದುವರಿದಿದ್ದು ಪಾರ್ಕಿ ಸ್ಥಳದಲ್ಲಿ ಹೆಚ್ಚುವರಿ ಅಗ್ನಿಶಾಮಕ ಸಿಬ್ಬಂದಿ ನಿಯೋಜನೆಯೊಡನೆ ರಕ್ಷಣಾ ಕ್ರಮಗಳನ್ನು ಬಲಗೊಳಿಸಲಾಗಿದೆ.
ಈ ನಡುವೆ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಬೆಂಕಿ ಅವಘಡ ನಡೆದ ಪಾರ್ಕಿಂಗ್ ಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com