ಅಪಾರ ಪ್ರಮಾಣದ ಬೆಳ್ಳಿ ಸಾಮಗ್ರಿ ಅಕ್ರಮ ಸಾಗಣೆ; ಕೆಎಸ್ ಆರ್ ಟಿಸಿ ಚಾಲಕ, ಕಂಡಕ್ಟರ್​ ಅಮಾನತು

ಕೆಎಸ್​ಆರ್​ಟಿಸಿ ಬಸ್ ನಲ್ಲಿ 15 ಲಕ್ಷ ರೂ.ಗೂ ಅಧಿಕ ಮೌಲ್ಯದ ಬೆಳ್ಳಿ ವಸ್ತುಗಳನ್ನು ಕಳ್ಳ ಸಾಗಣೆ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ಬಸ್ ಚಾಲಕ ಮತ್ತು ಕಂಡಕ್ಟರ್ ನನ್ನು ಕೆಎಸ್ ಆರ್ ಟಿಸಿ ಸಂಸ್ಛೆ​ ಅಮಾನತು ಮಾಡಿದೆ.
ವಶಪಡಿಸಿಕೊಳ್ಳಲಾದ ಬೆಳ್ಳಿ ದೀಪಗಳು
ವಶಪಡಿಸಿಕೊಳ್ಳಲಾದ ಬೆಳ್ಳಿ ದೀಪಗಳು
ಬೆಂಗಳೂರು: ಕೆಎಸ್​ಆರ್​ಟಿಸಿ ಬಸ್ ನಲ್ಲಿ 15 ಲಕ್ಷ ರೂ.ಗೂ ಅಧಿಕ ಮೌಲ್ಯದ ಬೆಳ್ಳಿ ವಸ್ತುಗಳನ್ನು ಕಳ್ಳ ಸಾಗಣೆ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ಬಸ್ ಚಾಲಕ ಮತ್ತು ಕಂಡಕ್ಟರ್ ನನ್ನು ಕೆಎಸ್ ಆರ್ ಟಿಸಿ ಸಂಸ್ಛೆ​ ಅಮಾನತು ಮಾಡಿದೆ.
ಬೆಂಗಳೂರು- ವಿಜಯವಾಡ ಮಾರ್ಗದಲ್ಲಿ ಸಾಗುತ್ತಿದ್ದ ಕೆಎಸ್​ಆರ್​ಟಿಸಿ ಐರಾವತ ಕ್ಲಬ್ ​ಕ್ಲಾಸ್​ ಬಸ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ರೂ. 15 ಲಕ್ಷ ಮೌಲ್ಯದ ಬೆಳ್ಳಿ ದೀಪಗಳನ್ನು ಹೊಸಕೋಟೆ ಟೋಲ್ ಬಳಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಬಸ್ ಸಂಖ್ಯೆ ಕೆಎ 57 ಎಫ್​ 2844 ಬಸ್ ನಲ್ಲಿ ಬೆಳ್ಳಿ ವಸ್ತುಗಳನ್ನು ಸಾಗಿಸಲಾಗುತ್ತಿತ್ತು ಎಂಬ ಮಾಹಿತಿಯನ್ನು ಆಧರಿಸಿ ಬೆಂಗಳೂರು ಕೇಂದ್ರ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಭಾಕರ್ ರೆಡ್ಡಿ ನೇತೃತ್ವದಲ್ಲಿ ಬಸ್ ಅನ್ನು ತಡೆದು ಪರಿಶೀಲನೆ ನಡಿಸಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. 
ಯಾವುದೇ ದಾಖಲೆಗಳಿಲ್ಲದೆ ಐರಾವತ ಕ್ಲಬ್​ ಕ್ಲಾಸ್​ ಬಸ್​ನಲ್ಲಿ 4 ಬ್ಯಾಗ್​ಗಳಲ್ಲಿ ಸಾಗಾಟ ಮಾಡುತ್ತಿದ್ದ ಬೆಳ್ಳಿ ದೀಪ ಇನ್ನಿತರೆ ಬೆಳ್ಳಿ ವಸ್ತುಗಳ ಮೌಲ್ಯ 15 ಲಕ್ಷಕ್ಕೂ ಅಧಿಕ ಎಂದು ಅಂದಾಜಿಸಲಾಗಿದೆ. ಜಪ್ತಿಯಾಗಿರುವ ಬೆಳ್ಳಿ ಸಾಮಗ್ರಿಗಳನ್ನು ವಾಣಿಜ್ಯ ತೆರಿಗೆ ಇಲಾಖೆಗೆ ಹಸ್ತಾಂತರಿಸಲಾಗಿದೆ. ಈ ಬೆಳ್ಳಿ ವಸ್ತುಗಳನ್ನು ಆಂಧ್ರಪ್ರದೇಶಕ್ಕೆ ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ.
ಬಸ್ ನ ಲಗೇಜ್​ ಬಾಕ್ಸ್ ​ನಲ್ಲಿಟ್ಟುಕೊಂಡು ಸಾಗಾಟ ಮಾಡುತ್ತಿದ್ದ ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಈ ಅಕ್ರಮದಲ್ಲಿ ಶಾಮೀಲಾಗಿದ್ದ ಬಸ್ ಚಾಲಕ, ನಿರ್ವಾಹಕನನ್ನು ಅಮಾನತುಗೊಳಿಸಲಾಗಿದೆ.  ಈ ಬಗ್ಗೆ ಕೆ್ಎಸ್ ಆರ್ ಟಿಸಿ ಸಂಸ್ಥೆ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮಾಹಿತಿ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com