ಬೆಂಗಳೂರು: ಕಿದ್ವಾಯಿಯಲ್ಲಿ ಅಸ್ಥಿಮಜ್ಜೆ ಕಸಿ ಘಟಕಕ್ಕೆ ಸಿಎಂ ಕುಮಾರಸ್ವಾಮಿ ಶಂಕುಸ್ಥಾಪನೆ

ಬಡ ಕ್ಯಾನ್ಸರ್ ರೋಗಿಗಳಿಗೆ ನೆರವಾಗಲು ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ದೇಶದಲ್ಲಿಯೇ ಅತಿ ದೊಡ್ಡ ...
ಕಿದ್ವಾಯಿ ಆಸ್ಪತ್ರೆ ಆವರಣದಲ್ಲಿ ಅಸ್ಥಿಮಜ್ಜೆ ಕಸಿ ಚಿಕಿತ್ಸಾ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ ಹೆಚ್ ಡಿ ಕುಮಾರಸ್ವಾಮಿ
ಕಿದ್ವಾಯಿ ಆಸ್ಪತ್ರೆ ಆವರಣದಲ್ಲಿ ಅಸ್ಥಿಮಜ್ಜೆ ಕಸಿ ಚಿಕಿತ್ಸಾ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ ಹೆಚ್ ಡಿ ಕುಮಾರಸ್ವಾಮಿ
Updated on

ಬೆಂಗಳೂರು: ಬಡ ಕ್ಯಾನ್ಸರ್ ರೋಗಿಗಳಿಗೆ ನೆರವಾಗಲು ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ದೇಶದಲ್ಲಿಯೇ ಅತಿ ದೊಡ್ಡ ಅಸ್ಥಿಮಜ್ಜೆ ಕಸಿ ಚಿಕಿತ್ಸಾ ಘಟಕದ (bone marrow transplant) ನಿರ್ಮಾಣಕ್ಕೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಶಂಕುಸ್ಥಾಪನೆ ನೆರವೇರಿಸಿದರು.

ಖಾಸಗಿ ಆಸ್ಪತ್ರೆಗಳಲ್ಲಿ 35 ಲಕ್ಷದವರೆಗೆ ವೆಚ್ಚವಾಗುವ ಅಸ್ಥಿಮಜ್ಜೆ ಕಸಿ ಚಿಕಿತ್ಸೆಯು ಈ ಕಟ್ಟಡ ನಿರ್ಮಾಣಗೊಂಡ ನಂತರ ಕಿದ್ವಾಯಿಯಲ್ಲಿ ಬಿಪಿಎಲ್ ಕಾರ್ಡುದಾರರಿಗೆ ಉಚಿತವಾಗಿ ಮತ್ತು ಇತರರಿಗೆ ಖಾಸಗಿ ಆಸ್ಪತ್ರೆ ದರದ ಶೇಕಡಾ 50ರಷ್ಟು ಕಡಿಮೆ ದರದಲ್ಲಿ ದೊರೆಯಲಿದೆ.

ಕಿದ್ವಾಯಿ ಆಸ್ಪತ್ರೆಯ ಜಿಂದಾಲ್ ಕೇಂದ್ರದ ನಾಲ್ಕನೇ ಅಂತಸ್ತಿನಲ್ಲಿ ಸುಮಾರು 15 ಸಾವಿರ ಚದರಡಿ ವಿಸ್ತೀರ್ಣದಲ್ಲಿ ಬೋನ್ ಮ್ಯಾರೋ ಟ್ರಾನ್ಸ್ ಪ್ಲೆಂಟೇಷನ್ ಘಟಕ 12 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ. ಘಟಕದಲ್ಲಿ 3 ಕೋಟಿ ರೂಪಾಯಿ ವೆಚ್ಚದಲ್ಲಿ ಯಂತ್ರೋಪಕರಣ ಅಳವಡಿಕೆ ಮಾಡಲಾಗುತ್ತದೆ. ಅಸ್ಥಿಮಜ್ಜೆ ಕಸಿ ಘಟಕದ ಕಟ್ಟಡದಲ್ಲಿ 20 ಪ್ರತ್ಯೇಕ ಹಾಗೂ ಸುಸಜ್ಜಿತ ಕೊಠಡಿ, ಮೂರು ಕಿರು ಶಸ್ತ್ರಚಿಕಿತ್ಸಾ ಘಟಕ, ವೈದ್ಯರ ವಿಶ್ರಾಂತಿ ಕೊಠಡಿ ಇರುತ್ತದೆ. ಸಂಪೂರ್ಣ ಸೋಂಕು ರಹಿತವಾದ ಈ ಕೊಠಡಿಗಳಲ್ಲೇ ರೋಗಿಗೆ ಅಸ್ಥಿಮಜ್ಜೆ ಕಸಿ ಚಿಕಿತ್ಸೆ ನಡೆಸಲಾಗುತ್ತದೆ.

ಇತ್ತೀಚಿನ ದಿನಗಳಲ್ಲಿ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿರುವವರಿಗೆ ಖಾಸಗಿ ಆಸ್ಪತ್ರೆಯಲ್ಲಿ ದುಬಾರಿ ಹಣ ನೀಡಿ ಚಿಕಿತ್ಸೆ ಪಡೆಯಲು ಸಾಧ್ಯವಾಗುತ್ತಿಲ್ಲ.ಮಕ್ಕಳ ಚಿಕಿತ್ಸೆಗಾಗಿ ನೆರವು ಕೋರಿ ಬಹಳಷ್ಟು ಮಂದಿ ತಮ್ಮ ಬಳಿಗೆ ಬರುತ್ತಾರೆ. ಇವುಗಳನ್ನು ಗಮನಿಸಿ ಬಡ ಜನರಿಗೆ ಉಚಿತವಾಗಿ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಿರುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com