ನಾಳೆ ಮಧ್ಯಾಹ್ನ 3ಗಂಟೆವರೆಗೆ ಸಾರ್ವಜನಿಕರಿಗೆ, ಭಕ್ತರಿಗೆ ಶ್ರೀಗಳ ಲಿಂಗಶರೀರದ ಅಂತಿಮ ದರ್ಶನ ಪಡೆಯಲು ಅವಕಾಶ ಕಲ್ಪಿಸಿಕೊಡಲಾಗಿದೆ. ವಿಐಪಿ, ವಿವಿಐಪಿಗಳಿಗೆ ಪ್ರತ್ಯೇಕ ಸಾಲಿನ ವ್ಯವಸ್ಥೆ ಮಾಡಲಾಗಿದೆ. ಶ್ರೀಗಳ ಅಂತಿಮ ದರ್ಶನಕ್ಕೆ ಬರುವ ಭಕ್ತರಿಗೆ ಸರ್ಕಾರ ತುಮಕೂರು ಸುತ್ತಮುತ್ತ ಜನರಿಗೆ ಉಚಿತ ಬಸ್ ವ್ಯವಸ್ಥೆ ಮಾಡಿರುವುದಾಗಿ ತಿಳಿಸಿದೆ.