ಈ ಬಗ್ಗೆ ಇಂದು ತುಮಕೂರಿನ ಶ್ರೀಮಠದಲ್ಲಿ ಮಾತನಾಡಿದ ಸಿಎಂ ಕುಮಾರಸ್ವಾಮಿ ಅವರು, ಶ್ರೀಗಳು ಲಿಂಗೈಕ್ಯರಾದ ಹಿನ್ನಲೆಯಲ್ಲಿ ಇಂದು ಮಧ್ಯಾಹ್ನದಿಂದಲೇ ತುಮಕೂರಿನಲ್ಲಿ ಶಾಲಾ ಕಾಲೇಜುಗಳಿಗೆಳ ರಜೆ ಘೋಷಣೆ ಮಾಡಲಾಗಿದೆ. ಅಂತೆಯೇ ನಾಳೆ ರಾಜ್ಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಲ್ಲದೆ ಮೂರು ದಿನ ರಾಜ್ಯದಲ್ಲಿ ಶೋಕಾಚರಣೆಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಕುಮಾರಸ್ವಾಮಿ ಮಾಹಿತಿ ನೀಡಿದರು.