ಮಠಕ್ಕೆ ಆಗಮಿಸಿ ತನ್ನ ಶಿಷ್ಯ ಶಿವಣ್ಣನಿಗೆ ನಡೆದದ್ದನ್ನು ಶಿವಯೋಗಿಗಳು ವಿವರಿಸಿದ್ದಾರೆ. ಇದನ್ನು ಕೇಳಿದಾಗ ಗುರುಗಳ ಮೇಲೆ ಅಪಾರ ಭಕ್ತಿ ಇದ್ದ ಸ್ವಾಮೀಜಿಗೆ ಬಹಳ ಬೇಸರವಾಗಿತ್ತು. ತಮ್ಮ ಪೋಷಕರ ವರ್ತನೆ, ಶ್ರೀಗಳಿಗೆ ತೋರಿಸಿದ ಉದಾಸೀನ ಅವರಿಗೆ ಬಹಳ ನೋವು ನೀಡಿತು. ಇದರಿಂದಾಗಿ ಅವರು ವೀರಾಪುರಕ್ಕೆ ತೆರಳುವುದನ್ನೇ ಬಿಟ್ಟರು.