ವಿಡಿಯೋ ವೈರಲ್ ಆಗುತ್ತಿದ್ದಂತೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಸಚಿವ ಸಾ.ರಾ.ಮಹೇಶ್ ಅವರು, ನಾನು ಮಂತ್ರಿ ಎಂದು ಹೇಳಿದರೂ ನನ್ನನ್ನು ತಡೆದರು. ಕೆಲವು ಅಧಿಕಾರಿಗಳಿಗೆ ಮಂತ್ರಿಗಳು ಯಾರು ಎನ್ನುವುದೇ ಗೊತ್ತಿರಲಿಲ್ಲ. ಹಾಗಾಗಿ ನಾವೇ ನಮ್ಮನ್ನು ಅವರಿಗೆ ಪರಿಚಯಿಸಿಕೊಳ್ಳುತ್ತೇವೆ. ನನ್ನ ಹಿಂದೆ ಬಂದ ಸಚಿವ ವೆಂಕಟರಾವ್ ನಾಡಗೌಡರು ಬಂದಾಗ ಇದೇ ಎಸ್ಪಿ ತಡೆದಿದ್ದರು. ನಾಡಗೌಡರೂ ನಾನು ಮಂತ್ರಿ ಇದ್ದೇನಮ್ಮಾ, ಒಳಗೆ ಹೋಗಲು ಬಿಡಿ. ಶ್ರೀಗಳ ದರ್ಶನ ಪಡೆದು ಹಿಂದಿರುಗುತ್ತೇನೆಂದು ಮನವಿ ಮಾಡಿಕೊಂಡಿದ್ದರು ಎಂದರು.