ಪ್ರಾರ್ಥನಾ ಮಂದಿರವಾಯ್ತು ಸಿದ್ದಗಂಗಾ ಶ್ರೀಗಳು ಚಿಕಿತ್ಸೆ ಪಡೆದ ಐಸಿಯು ಕೊಠಡಿ

ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರಿಗೆ ಚಿಕಿತ್ಸೆ ನೀಡುತ್ತಿದ್ದ ಸಿದ್ದಗಂಗಾ ಆಸ್ಪತ್ರೆಯ ಐಸಿಯು ಕೊಠಡಿ ಪ್ರಾರ್ಥನಾ ಮಂದಿರವಾಗಿ ಬದಲಾಗಿದೆ...
ಸಿದ್ದಗಂಗಾ ಶ್ರೀ
ಸಿದ್ದಗಂಗಾ ಶ್ರೀ
Updated on
ತುಮಕೂರು: ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರಿಗೆ ಚಿಕಿತ್ಸೆ ನೀಡುತ್ತಿದ್ದ ಸಿದ್ದಗಂಗಾ ಆಸ್ಪತ್ರೆಯ ಐಸಿಯು ಕೊಠಡಿ ಪ್ರಾರ್ಥನಾ ಮಂದಿರವಾಗಿ ಬದಲಾಗಿದೆ.
ಪ್ರಾರ್ಥನಾ ಮಂದಿರದ ಕೊಠಡಿಯಲ್ಲಿ ಶ್ರೀಗಳ ಭಾವಚಿತ್ರ ಇಟ್ಟು ದಿನ ನಿತ್ಯ ಪೂಜೆ ಸಲ್ಲಿಸಲಾಗುತ್ತಿದೆ. ಅಲ್ಲದೇ ರೋಗಿಗಳಿಗೆ ಶಸ್ತ್ರಚಿಕಿತ್ಸೆ ಮಾಡುವ ಮುನ್ನ ವೈದ್ಯರು, ರೋಗಿಗಳು ಸಂಬಂಧಿಕರು ಯಶಸ್ವಿ ಶಸ್ತ್ರಚಿಕಿತ್ಸೆಗಾಗಿ ಪ್ರಾರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಈ ಮೂಲಕ ಶ್ರೀಗಳು ಇದ್ದ ಕೊಠಡಿ ಪುಣ್ಯಸ್ಥಳವಾಗಿ ಮಾರ್ಪಟ್ಟಿದೆ
ತುಂಬಾ ವಿಶಾಲವಾದ ಕೊಠಡಿಯಾಗಿದ್ದು, ಸುಮಾರು 50 ಮಂದಿ ಕೂರಬಹುದಾಗಿದೆ, ಜನವರಿ 3ರಂದು ಶ್ರೀಗಳನ್ನು ಐಸಿಯುಗೆ ಶಿಫ್ಟ್ ಮಾಡಲಾಗಿತ್ತು, ಜನವರೀ 15ರ ವರೆಗೂ ಅಲ್ಲಿಯೇ ಚಿಕಿತ್ಸೆ ಕೊಡಲಾಗಿತ್ತು. ಶ್ರೀಗಳಿಗೆ ಮ್ಯೂಸಿಕ್ ಪ್ಲೇಯರ್ ಮೂಲಕ ಕೇಳಿಸುತ್ತಿದ್ದ ಶಿವಸ್ತುತಿಯೂ ಸಹ ಹಾಗೆಯೇ ಮುಂದುವರಿದಿದೆ. 
ಕೋಟ್ಯಂತರ ರೂ. ವೆಚ್ಚ ಮಾಡಿ ನಿರ್ಮಾಣ ಮಾಡಿದ್ದ ಕೊಠಡಿ ಇದೀಗ ಬೇರೆ ಯಾವುದೇ ರೋಗಿಗಳಿಗೆ ನೀಡದೇ ಪ್ರಾರ್ಥನ ಮಂದಿರವಾಗಿ ಪರಿವರ್ತನೆ ಮಾಡಲಾಗಿದೆ.
ಸ್ವಾಮೀಜಿ ಅವರ ಆರೋಗ್ಯದಲ್ಲಿ ಏರುಪೇರು ಕಂಡಾಗ ಅವರನ್ನು ಚೆನ್ನೈನ ರೇಲಾ ಅವರ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಿದ್ದೇವು. ಬಳಿಕ ಅವರನ್ನು ವಾಪಸ್ ಕರೆದುಕೊಂಡು ಬರುವಾಗ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಬೇಕು ಎಂದು ಎಲ್ಲಾ ತಯಾರಿ ಮಾಡಿಕೊಂಡಿದ್ದೇವು. ಆದರೆ ಸ್ವಾಮೀಜಿ ಅವರು ಮಠದಲ್ಲಿಯೇ ಚಿಕಿತ್ಸೆ ನೀಡಿ ಎಂದರು. ಆಗ ನಾವು ಅವರ ಇಚ್ಛೆಯಂತೆ ಮಠದಲ್ಲೇ 15 ದಿನ ಚಿಕಿತ್ಸೆ ನೀಡಿದ್ದೇವೆ ಎಂದು ಆಸ್ಪತ್ರೆ ನಿರ್ದೇಶಕ ಡಾ, ಪರಮೇಶ್ ಹೇಳಿದ್ದಾರೆ.
ಸ್ವಾಮೀಜಿಗಾಗಿ ಆಸ್ಪತ್ರೆಯ ಕೊಠಡಿಯಲ್ಲೇ ದೇವರ ಮನೆ ಮಾಡಿದ್ದೇವು. ಬಳಿಕ ಅವರನ್ನು ಇಲ್ಲಿಗೆ ಕರೆದುಕೊಂಡು ಬಂದು ಚಿಕಿತ್ಸೆ ನೀಡಿದ್ದೇವು. ಅವರ ನೆನಪಿಗಾಗಿ ನಾವು ಈ ಕೋಣೆಯನ್ನು ಪ್ರಾರ್ಥನಾ ಮಂದಿರವಾಗಿ ಪರಿವರ್ತನೆ ಮಾಡಲಾಗಿದೆ. ಬೆಳಗ್ಗೆ ಮತ್ತು ಸಂಜೆ ಎರಡು ಸಮಯದಲ್ಲಿ ಪ್ರಾರ್ಥನೆ ಮಾಡಲಾಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com