ಮೊದಲ ಹಂತದಲ್ಲಿ ಹೃದಯ, ಮೂತ್ರಪಿಂಡ ಮತ್ತು ಯಕೃತ್ತಿನ ಕಸಿಗಳಿಗೆ ಸರ್ಕಾರವು ಆರ್ಥಿಕ ನೆರವನ್ನು ನೀಡುತ್ತದೆ. ಪತ್ರಿಕೆಯೊಡನೆ ಈ ವಿಚಾರವಾಗಿ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಡಾ.ಪ್ರಭಾಕರ್ "ಈ ಯೋಜನೆಯನ್ನು 2018-19ರ ಬಜೆಟ್ ನಲ್ಲಿ ಘೋಷಣೆಯಾಗಿತ್ತು. ಈಗ ಆದೇಶ ಹೊರಬಂದಿದೆ.ಮಾರ್ಗದರ್ಶಿ ಸೂತ್ರಗಳ ಪ್ರಕಾರ, ಇಲಾಖೆ ಪ್ರಕ್ರಿಯೆಗೆ ಮುಂಚಿತವಾಗಿ ಹಣವನ್ನು ಬಿಡುಗಡೆ ಮಾಡುತ್ತದೆ, ಆಸ್ಪತ್ರೆಯಲ್ಲಿ ರೋಗಿಗಳನ್ನು ಸೇರಿಸುವಾಗ ಈ ಹಣ ಆಸ್ಪತ್ರೆಗೆ ಸಂದಾಯವಾಗಲಿದೆ.""ಎಂದರು.