ಟಿಪ್ಪು, ಚಾಮುಂಡಿ, ವಿಶ್ವಮಾನವ ಎಕ್ಸ್ ಪ್ರೆಸ್ ಸೇರಿದಂತೆ ಮತ್ತಿತರ ರೈಲುಗಳಲ್ಲಿ ಈ ಭದ್ರತಾ ವ್ಯವಸ್ಥೆ ಒದಗಿಸಲಾಗಿದೆ. ಕೆಂಗೇರಿ ಬಳಿ ಮಹಿಳಾ ಬೋಗಿಗೆ ಆಗಮಿಸಿದ ವ್ಯಕ್ತಿಗಳನ್ನು ಬಂಧಿಸಲಾಗಿದೆ. ಮಹಿಳಾ ಪ್ರಯಾಣಿಕರು ಸಂಕಷ್ಟದ ಸಂದರ್ಭದಲ್ಲಿ ಕೇವಲ ಒಂದು ಸಂದೇಶ ಕಳುಹಿಸಿದರೆ ಸಾಕು ನಾವು ಅಲ್ಲಿಗೆ ಬರುತ್ತೇವೆ ಎಂದು ಅವರು ಹೇಳಿದರು.