2005ರ ನಕ್ಸಲ್ ಹತ್ಯಾಕಾಂಡ ಪ್ರಕರಣ : ಪೊಲೀಸ್ ಕಸ್ಟಡಿಗೆ ವರವರ ರಾವ್

2005ರ ಫೆ.5 ರಂದು ಪಾವಗಡದ ವೆಂಕಟಮ್ಮನಹಳ್ಳಿಯಲ್ಲಿ ಕೆಎಸ್ಆರ್​ಪಿ ಕ್ಯಾಂಪ್‌ ಮೇಲೆ ನಕ್ಸಲ್ ದಾಳಿ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕವಿ ವರವರ ರಾವ್ ...
Updated on
ತುಮಕೂರು: 2005ರ ಫೆ.5 ರಂದು ಪಾವಗಡದ ವೆಂಕಟಮ್ಮನಹಳ್ಳಿಯಲ್ಲಿ ಕೆಎಸ್ಆರ್​ಪಿ ಕ್ಯಾಂಪ್‌ ಮೇಲೆ ನಕ್ಸಲ್ ದಾಳಿ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕವಿ ವರವರ ರಾವ್ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಎರಡು ದಿನಗಳ ಕಾಲ ಪೊಲೀಸ್ ವಶಕ್ಕೆ ಒಪ್ಪಿಸಿ ಪಾವಗಡ ಜೆಎಂಎಫ್​ಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ತಿರುಮಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಈ ಪ್ರಕರಣದಲ್ಲಿ ವರವರ ರಾವ್ 12ನೇ ಆರೋಪಿಯಾಗಿದ್ದರು. ಅಲ್ಲದೆ ಇವರ ವಿರುದ್ಧ ಚಾರ್ಜ್​ ಶೀಟ್ ಕೂಡ ದಾಖಲಾಗಿತ್ತು. ವರವರ ವಿರುದ್ಧ ಜಾಮೀನು ರಹಿತ ವಾರೆಂಟ್ ಕೂಡ ಜಾರಿಯಾಗಿತ್ತು. ಆದರೆ, ಪುಣೆಯ ಯೆರವಾಡ ಜೈಲಿನಲ್ಲಿ ಯುಟಿಪಿ ನಂಬರ್ 3669/11 ವಿಚಾರಣಾಧೀನ ಕೈದಿಯಾಗಿ ವರವರ ರಾವ್ ಇದ್ದರು. ಬಾಡಿ ವಾರೆಂಟ್​ನೊಂದಿಗೆ ಅವರನ್ನು ವಶಕ್ಕೆ ತೆಗೆದುಕೊಂಡ ಪೊಲೀಸರು ಪಾವಗಡದ ಜೆಎಂಎಫ್​ಸಿ ಕೋರ್ಟ್​ಗೆ ಹಾಜರುಪಡಿಸಿದ್ದರು. 
ವಿಚಾರಣೆ ನಡೆಸಿದ ನ್ಯಾಯಾಲಯವು ಹೆಚ್ಚಿನ ವಿಚಾರಣೆಗಾಗಿ ಎರಡು ದಿನಗಳ ಕಾಲ ಪೊಲೀಸ್ ವಶಕ್ಕೆ ಒಪ್ಪಿಸಿದೆ. ಕೆಎಸ್ಆರ್​ಪಿ ಕ್ಯಾಂಪ್ ಮೇಲೆ ದಾಳಿ ನಡೆಸಿದ ಪ್ರಕರಣದಲ್ಲಿ ಒಟ್ಟು 78 ಮಂದಿ ಆರೋಪಿಗಳಿದ್ದಾರೆ. ಈ ಪೈಕಿ ಕೆಲ ಆರೋಪಿಗಳು ಮೃತಪಟ್ಟಿದ್ದರೆ, 43 ಮಂದಿ ಕಣ್ಮರೆಯಾಗಿದ್ದಾರೆ. 
ಅಂದಿನ ನಕ್ಸಲ್ ದಾಳಿಯಲ್ಲಿ ಕೆಎಸ್ಆರ್​ಪಿ ಪೊಲೀಸರು ಸೇರಿ ಏಳು ಜನ ಮೃತಪಟ್ಟಿದ್ದರು.ವರವರ ರಾವ್ ಅವರನ್ನು ಪುಣೆಯಿಂದ ಕರೆತಂದಿದ್ದ ಪೊಲೀಸರು ತುಮಕೂರು ಜಿಲ್ಲಾ ಕಾರಾಗೃಹದಲ್ಲಿ ಇರಿಸಿದ್ದರು.
ನಂತರ ಪಾವಗಡ ಜಿಎಂಎಫ್​ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲು ತುಮಕೂರು ಜಿಲ್ಲಾ ಕಾರಾಗೃಹದಿಂದ ಕರೆದೊಯ್ಯಲಾಗಿತ್ತು.  ಸದ್ಯ ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಸಂಚು ಆರೋಪದಡಿ ಅವರನ್ನು ಮಹಾರಾಷ್ಟ್ರದಲ್ಲಿ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com