ಜುಲೈ 13ರಂದು ರಜೆಯಲ್ಲಿದ್ದ ಪೈಲಟ್ ಜಿತೇಂದ್ರ ಸಿಂಗ್ ಅವರು ಕಾಕ್ ಪಿಟ್ ನಲ್ಲಿ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅವರನ್ನು ಆಲ್ಕೋಹಾಲ್ ಪರೀಕ್ಷೆಗೆ ಒಳಪಡಿಸಾಗಿದ್ದು, ಪರೀಕ್ಷೆಯಲ್ಲಿ ಮದ್ಯಪಾನ ಮಾಡಿರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಅಮಾನತುಗೊಳಿಸಲಾಗಿದೆ.