ಈ ಹಿಂದೆ ದುಬೈಗೆ ಪರಾರಿಯಾಗಿದ್ದ ಮನ್ಸೂರ್ ಖಾನ್, ತನಗೆ ಜೀವ ಬೆದರಿಕೆ ಇದೆ. ಪೊಲೀಸರು ಮತ್ತು ತನಿಖಾಧಿಕಾರಿಗಳು ತನಗೆ ಮತ್ತು ತನ್ನ ಕುಟುಂಬಕ್ಕೆ ಭದ್ರತೆ ನೀಡಿದರೆ ತಾನು ಶರಣಾಗಲು ಸಿದ್ಧ ಎಂದು ಹೇಳಿದ್ದ. ಅದರಂತೆ ಇಂದು ಆತ ದೆಹಲಿಗೆ ಆಗಮಿಸಿದ್ದು, ದೆಹಲಿ ವಿಮಾನ ನಿಲ್ದಾಣದಲ್ಲಿಯೇ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದಿದ್ದರು.