ಇನ್ನು ಈ ಹಿಂದೆ ಇದೇ ವಿಚಾರವಾಗಿ ಮಾತನಾಡಿದ್ದ ಸ್ಪೀಕರ್ ರಮೇಶ್ ಕುಮಾರ್ ಅವರು, ದೋಸ್ತಿ ನಾಯಕರನ್ನು ಉದ್ದೇಶಿಸಿ, 'ನೀವು ನಿರೀಕ್ಷೆ ಮಾಡುವ ಆದೇಶ ಕೊಡಲು ಸಾಧ್ಯವಿಲ್ಲ. ಆದರೆ, ವಿಪ್ ಉಲ್ಲಂಘಿಸಿದವರ ವಿರುದ್ಧ ನೀವು ದೂರು ನೀಡಿದರೆ ನಾನು ನಿರ್ಧಾಕ್ಷಿಣ್ಯವಾಗಿ ಕ್ರಮ ಜರುಗಿಸುತ್ತೇನೆ ಎಂದು ಹೇಳುವ ಮೂಲಕ ತಮ್ಮ ನಿಲುವು ಸ್ಪಷ್ಟಪಡಿಸಿದ್ದರು. ಹೀಗಾಗಿ ಸ್ಪೀಕರ್ ರಮೇಶ್ ಕುಮಾರ್ ಅವರು ಕೈಗೊಳ್ಳುವ ತೀರ್ಪು ಕೇವಲ ಅತೃಪ್ತರ ಪಾಲಿಗೆ ಮಾತ್ರವಲ್ಲ ಸರ್ಕಾರ ರಚನೆ ಮಾಡಲು ತುದಿಗಾಲಲ್ಲಿ ನಿಂತಿರುವ ಬಿಜೆಪಿ ಪಕ್ಷಕ್ಕೂ ನಿರ್ಣಾಯವಾಗಲಿದೆ.