ಬಂಡೀಪುರ ಅಭಯಾರಣ್ಯದಲ್ಲಿ ಮತ್ತೊಂದು ಹುಲಿ ಸಾವು

ಬಂಡೀಪುರ ಹುಲಿ ರಕ್ಷಿತಾರಣ್ಯದ ಒಳಗೆ ಜಂಗಲ್ ಲಾಜ್ಜ್ ಅಂಡ್ ರೆಸಾರ್ಟ್ ಹತ್ತಿರ 6 ವರ್ಷದ ಹೆಣ್ಣು ...
ಸಾವಿಗೀಡಾದ ಹುಲಿ
ಸಾವಿಗೀಡಾದ ಹುಲಿ
Updated on
ಮೈಸೂರು: ಬಂಡೀಪುರ ಹುಲಿ ರಕ್ಷಿತಾರಣ್ಯದ ಒಳಗೆ ಜಂಗಲ್ ಲಾಜ್ಜ್ ಅಂಡ್ ರೆಸಾರ್ಟ್ ಹತ್ತಿರ 6 ವರ್ಷದ ಹೆಣ್ಣು ಹುಲಿಯೊಂದು ಅಸುನೀಗಿರುವುದುಪತ್ತೆಯಾಯಿತು. ವೇಗವಾಗಿ ಬಂದ ವಾಹನದ ಅಡಿಗೆ ಸಿಲುಕಿ ಹುಲಿ ಸತ್ತಿರಬಹುದು ಎಂದು ಶಂಕಿಸಲಾಗಿದೆ.
ಬಂಡೀಪುರ ಅಭಯಾರಣ್ಯದ ಪ್ರವೇಶ ದ್ವಾರದಿಂದ ಸ್ವಲ್ಪ ದೂರದಲ್ಲಿ ರಾಷ್ಟ್ರೀಯ ಹೆದ್ದಾರಿ 766ರಡಿ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ಸಮೀಪ ಮಗುವನಹಳ್ಳಿ ಗ್ರಾಮದ ಗಡಿಭಾಗದಲ್ಲಿ ಹುಲಿಯ ಮೃತದೇಹ ಪತ್ತೆಯಾಗಿದೆ. ಕಳೆದ ಆರು ತಿಂಗಳಲ್ಲಿ ಒಟ್ಟು ನಾಲ್ಕು ಹುಲಿಗಳು ಬಂಡೀಪುರ ಅರಣ್ಯದಲ್ಲಿ ಮೃತಪಟ್ಟಿವೆ.
ಹುಲಿ ಸತ್ತು ಬಿದ್ದ ಸ್ವಲ್ಪ ದೂರದಲ್ಲಿ ಕಾಡು ಹಂದಿಯ ಅರ್ಧ ತಿಂದ ಮೃತದೇಹ ಸಿಕ್ಕಿದ್ದರಿಂದ ಕಾಡು ಹಂದಿ ಜೊತೆಗಿನ ಜಗಳದಲ್ಲಿ ಗಾಯಗೊಂಡು ಹುಲಿ ಸತ್ತಿರಬೇಕೆಂದು ಆರಂಭದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಭಾವಿಸಿದ್ದರು. 
ನಂತರ ಶವಪರೀಕ್ಷೆ ಮಾಡಿದ ನಂತರ ಹುಲಿಯ ಮೈ ಮೇಲೆ ಹಲವು ಗಾಯಗಳು ಕಂಡುಬಂದಿದ್ದು ಅವುಗಳಲ್ಲಿ ವಾಹನದ ಅಡಿಗೆ ಸಿಲುಕಿ ಆದ ಗಾಯ ಕೂಡ ಇದ್ದಿತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com