ಕಾಫಿ ಡೇ ಮಾಲೀಕ ವಿಜಿ ಸಿದ್ಧಾರ್ಥ್ ನಾಪತ್ತೆ: ರಕ್ಷಣಾ ಕಾರ್ಯಾಚರಣೆಗೆ ನೆರವು ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ!

ಮಂಗಳೂರಿನಲ್ಲಿ ನಾಪತ್ತೆಯಾಗಿರುವ ಕಾಫಿ ಡೇ ಮಾಲೀಕ ಹಾಗೂ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಅಳಿಯ ವಿಜೆ ಸಿದ್ಧಾರ್ಥ್ ಅವರ ಪತ್ತೆಗೆ ಕೇಂದ್ರ ಸರ್ಕಾರದ ನೆರವು ಕೋರಿ ಬಿಜೆಪಿ ಸಂಸದರು ಮನವಿ ಪತ್ರ ನೀಡಿದ್ದಾರೆ.
ಅಮಿತ್ ಶಾಗೆ ರಾಜ್ಯ ಸಂಸದರಿಂದ ಮನವಿ
ಅಮಿತ್ ಶಾಗೆ ರಾಜ್ಯ ಸಂಸದರಿಂದ ಮನವಿ
Updated on
ನವದೆಹಲಿ: ಮಂಗಳೂರಿನಲ್ಲಿ ನಾಪತ್ತೆಯಾಗಿರುವ ಕಾಫಿ ಡೇ ಮಾಲೀಕ ಹಾಗೂ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಅಳಿಯ ವಿಜೆ ಸಿದ್ಧಾರ್ಥ್ ಅವರ ಪತ್ತೆಗೆ ಕೇಂದ್ರ ಸರ್ಕಾರದ ನೆರವು ಕೋರಿ ಬಿಜೆಪಿ ಸಂಸದರು ಮನವಿ ಪತ್ರ ನೀಡಿದ್ದಾರೆ.
ಇಂದು ಬೆಳಗ್ಗೆ ಬಿಜೆಪಿ ಸಂಸದರಾದ ಶೋಭಾ ಕರಂದ್ಲಾಜೆ, ಸಂಸದ ನಳೀನ್ ಕುಮಾರ್ ಕಟೀಲ್ ಸೇರಿದಂತೆ ಕರ್ನಾಟಕದ ಬಿಜೆಪಿ ಸಂಸದರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಕೆ ಮಾಡಿದ್ದಾರೆ. ಪತ್ರದಲ್ಲಿ ಮಂಗಳೂರಿನ ನೇತ್ರಾವತಿ ನದಿಯಲ್ಲಿ ಕಾಣೆಯಾಗಿರುವ ವಿಜೆ ಸಿದ್ಧಾರ್ಥ್ ಅವರ ಪತ್ತೆಗಾಗಿ ಸೇನಾ ಹೆಲಿಕಾಪ್ಟರ್ ಗಳನ್ನು ರವಾನೆ ಮಾಡುವಂತೆ ಕೋರಿದ್ದಾರೆ ಎನ್ನಲಾಗಿದೆ.
ಅಂತೆಯೇ ಕೇಂದ್ರ ರಕ್ಷಣಾ ಇಲಾಖೆಗೂ ಇಂತಹುದೇ ಪತ್ರ ನೀಡಿರುವ ಸಂಸದರು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೂ ಮನವಿ ಪತ್ರ ನೀಡಿರುವ ಸಂಸದರು ರಕ್ಷಣಾ ಕಾರ್ಯಾಚರಣೆಗೆ ನೆರವು ನೀಡುವಂತೆ ಕೋರಿದ್ದಾರೆ. ಈ ವೇಳೆ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಸಂಸದರಾದ ನಳಿನ್ ಕುಮಾರ್ ಕಟೀಲ್, ಕರಡಿ ಸಂಗಣ್ಣ, ಭಗವಂತ್ ಖುಬಾ, ಬಿ ಸಿ ಗತ್ತಿಗೌಡ ಮತ್ತು ವೈ ದೇವೇಂದ್ರಪ್ಪ ಅವರು ಸಾಥ್ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com