ಕೆಫೆ ಕಾಫಿ ಡೇ ಸಂಸ್ಥಾಪಕ ವಿಜಿ ಸಿದ್ದಾರ್ಥ ಪಂಚಭೂತಗಳಲ್ಲಿ ಲೀನ!

ಕೆಫೆ ಕಾಫಿ ಡೇ ಸಂಸ್ಥಾಪಕ, ಉದ್ಯಮಿ ವಿಜಿ ಸಿದ್ದಾರ್ಥ ಅವರ ಅಂತ್ಯ ಸಂಸ್ಕಾರ ಚಿಕ್ಕಮಗಳೂರಿನ ಚಟ್ಟನಹಳ್ಳಿಯಲ್ಲಿ ನೆರವೇರಿತು.
ವಿಜಿ ಸಿದ್ದಾರ್ಥ
ವಿಜಿ ಸಿದ್ದಾರ್ಥ
Updated on
ಬೆಂಗಳೂರು: ಕೆಫೆ ಕಾಫಿ ಡೇ ಸಂಸ್ಥಾಪಕ, ಉದ್ಯಮಿ ವಿಜಿ ಸಿದ್ದಾರ್ಥ ಅವರ ಅಂತ್ಯ ಸಂಸ್ಕಾರ ಚಿಕ್ಕಮಗಳೂರಿನ ಚಟ್ಟನಹಳ್ಳಿಯಲ್ಲಿ ನೆರವೇರಿತು.
ವಿಜಿ ಸಿದ್ದಾರ್ಥ ಅವರ ಚಿತೆಗೆ ಪುತ್ರರು ಅಗ್ನಿ ಸ್ಪರ್ಶ ಮಾಡಿದರು. ಒಕ್ಕಲಿಗ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು. 
ವಿಜಿ ಸಿದ್ದಾರ್ಥ ಅವರು ಸೋಮವಾರ ರಾತ್ರಿ ಮಂಗಳೂರಿನ ಸೇತುವೆಯೊಂದರ ಬಳಿ ನಾಪತ್ತೆಯಾಗಿದ್ದು ಇಂದು ಬೆಳಗ್ಗೆ ಸಿದ್ದಾರ್ಥ ಅವರ ಮೃತದೇಹ ಪತ್ತೆಯಾಗಿತ್ತು. 
ಚಿಕ್ಕಮಗಳೂರಿನಲ್ಲಿ ಅಂತ್ಯ ದರ್ಶನಕ್ಕೆ ಹಣಿ ಮಾಡಲಾಗಿತ್ತು. ಈ ವೇಳೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಡಿಕೆ ಶಿವಕುಮಾರ್ ಸೇರಿದಂತೆ ಗಣ್ಯರು ಅಂತಿಮ ದರ್ಶನ ಪಡೆದ ಬಳಿಕ ಹುಟ್ಟೂರು ಚಟ್ಟನಹಳ್ಳಿಯ ಚೇತನಹಳ್ಳಿ ಎಸ್ಟೇಟ್ ನಲ್ಲಿ ಅಂತ್ಯ ಸಂಸ್ಕಾರ ಮಾಡಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com