ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಂದ ತೀವ್ರ ಕಿರುಕುಳ ಮತ್ತು ಮಾನಸಿಕ ಒತ್ತಡ ಎದುರಾಯಿತು ಎಂದು ಸಿದ್ದಾರ್ಥ್ ಬರೆದಿದ್ದಾರೆ ಎನ್ನಲಾದ ಪತ್ರದ ಕುರಿತು ರಕ್ಷಣಾತ್ಮಕ ಹೇಳಿಕೆ ನೀಡಿರುವ ಐಟಿ ಇಲಾಖೆ ಅಧಿಕಾರಿಗಳು, ವಿವಾದಾತ್ಮಕ ಕಾಂಗ್ರೆಸ್ ನಾಯಕನ ನಿವಾಸದ ಮೇಲೆ ಇಲಾಖೆ ದಾಳಿ ನಡೆಸಿ ದಾಖಲೆಗಳ ಜಾಡು ಹಿಡಿದು ಹೋದಾಗ ನಮಗೆ ಸಿಕ್ಕಿದ್ದು ಸಿಸಿಡಿಯೊಂದಿಗಿನ ಹಣಕಾಸು ವಹಿವಾಟು ಮತ್ತು ಅವ್ಯವಹಾರ. ಈ ನಿಟ್ಟಿನಲ್ಲಿ ಸಿದ್ಧಾರ್ಥ್ ಅವರ ಕಂಪೆನಿಗಳ ಮೇಲೆ ದಾಳಿ ನಡೆಸಲಾಯಿತೆ ಹೊರತು ನೇರವಾಗಿ ಸಿದ್ದಾರ್ಥ್ ಅವರ ಕಂಪೆನಿಗಳು ಮತ್ತು ಸಂಸ್ಥೆ ಮೇಲೆ ಎಂದೂ ದಾಳಿ ಮಾಡಿಲ್ಲ ಎನ್ನುತ್ತಾರೆ.