ಬೆಂಗಳೂರು: ನೇಣು ಬಿಗಿದುಕೊಂಡು ಪತ್ರಕರ್ತ ಆತ್ಮಹತ್ಯೆ

ಖಾಸಗಿ ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದ ಪತ್ರಕರ್ತರೊಬ್ಬರು ತಮ್ಮ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಬೆಂಗಳೂರು: ಖಾಸಗಿ ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದ ಪತ್ರಕರ್ತರೊಬ್ಬರು ತಮ್ಮ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೆ.ಆರ್‌. ಪುರದ ದೇವಸಂದ್ರ ನಿವಾಸಿ, ಖಾಸಗಿ ಸುದ್ದಿವಾಹಿನಿಯೊಂದರ ಸ್ಥಳೀಯ ವರದಿಗಾರ ನಯಾಝ್‌ ಖಾನ್‌ (36 ವರ್ಷ) ಮಂಗಳವಾರ ತಡರಾತ್ರಿ ತಮ್ಮ ಮನೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. 
ರಾತ್ರಿ 12.30ಕ್ಕೆ ಮನೆಗೆ ಬಂದಿದ್ದ ನಯಾಝ್‌, ಮನೆಯ ಹಾಲ್‌ನಲ್ಲಿ ಮಲಗಿದ್ದರು. ಕೊಠಡಿಯಲ್ಲಿ ಮಕ್ಕಳ ಜೊತೆ ಮಲಗಿದ್ದ ಪತ್ನಿ, ಬುಧವಾರ ನಸುಕಿನ 6.30ಕ್ಕೆ ಎದ್ದು ನೋಡಿದಾಗ ಪತಿ ಆತ್ಮಹತ್ಯೆ ಮಾಡಿರುವುದು ಗೊತ್ತಾಗಿದೆ. ದಂಪತಿಗೆ ಮೂವರು ಮಕ್ಕಳಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಗೊತ್ತಾಗಿಲ್ಲ.
ಪೊಲೀಸ್‌ ಕಮಿಷನರ್‌ ಸುನೀಲ್‌ ಕುಮಾರ್‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಅಂತ್ಯ ಕ್ರಿಯೆಗಾಗಿ ನಯಾಝ್‌ ಅವರ ಸ್ವಂತ ಊರು ಚಿಂತಾಮಣಿಗೆ ಕೊಂಡೊಯ್ಯಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com