ಬೆಂಗಳೂರು: ರೈತರು ವಾಣಿಜ್ಯ ಬ್ಯಾಂಕುಗಳಿಂದ ಪಡೆದಿರುವ ಬೆಳೆಸಾಲ ಮನ್ನಾ ಯೋಜನೆಗೆ ಸಂಬಂಧಿಸಿದಂತೆ ಅರ್ಹತೆ ಹೊಂದಿರುವ ರಿಸ್ಟ್ರಕ್ಚರ್ಡ್ ಸಾಲಗಳು, ಅರ್ಹತೆ ಹೊಂದಿರುವ ಓವರ್ ಡ್ಯೂ ಸಾಲಗಳು ಹಾಗೂ ಪ್ರೋತ್ಸಾಹ ಧನಕ್ಕೆ ಅರ್ಹತೆ ಹೊಂದಿರುವ ಸಾಲಗಳಿಗೆ ಸಂಬಂಧಿಸಿದಂತೆ ಈಗಾಗಲೇ ಬಿಡುಗಡೆಯಾದ ಮೊತ್ತವನ್ನು ಕಡಿತಗೊಳಿಸಿ, ಉಳಿದ ಸಂಪೂರ್ಣ ಮೊತ್ತವನ್ನು ಒಂದೇ ಕಂತಿನಲ್ಲಿ ರೈತರ ಖಾತೆಗೆ ಬಿಡುಗಡೆ ಮಾಡಲು ಅನುಮೋದನೆ ನೀಡಿ ರಾಜ್ಯ ಸರ್ಕಾರ ಬುಧವಾರ ಮಹತ್ವದ ಆದೇಶ ಹೊರಡಿಸಿದೆ.