ವಾಣಿಜ್ಯ ಬ್ಯಾಂಕುಗಳ ಬೆಳೆಸಾಲ ಒಂದೇ ಕಂತಿನಲ್ಲಿ ಮನ್ನಾ: ಹಣ ಬಿಡುಗಡೆಗೆ ರಾಜ್ಯ ಸರ್ಕಾರ ಆದೇಶ

ರೈತರು ವಾಣಿಜ್ಯ ಬ್ಯಾಂಕುಗಳಿಂದ ಪಡೆದಿರುವ ಬೆಳೆಸಾಲ ಮನ್ನಾ ಯೋಜನೆಗೆ ಸಂಬಂಧಿಸಿದಂತೆ ಅರ್ಹತೆ ಹೊಂದಿರುವ...
ಸಿಎಂ ಕುಮಾರಸ್ವಾಮಿ
ಸಿಎಂ ಕುಮಾರಸ್ವಾಮಿ
Updated on
ಬೆಂಗಳೂರು: ರೈತರು ವಾಣಿಜ್ಯ ಬ್ಯಾಂಕುಗಳಿಂದ ಪಡೆದಿರುವ ಬೆಳೆಸಾಲ ಮನ್ನಾ ಯೋಜನೆಗೆ ಸಂಬಂಧಿಸಿದಂತೆ ಅರ್ಹತೆ ಹೊಂದಿರುವ ರಿಸ್ಟ್ರಕ್ಚರ್ಡ್ ಸಾಲಗಳು, ಅರ್ಹತೆ ಹೊಂದಿರುವ ಓವರ್ ಡ್ಯೂ ಸಾಲಗಳು ಹಾಗೂ ಪ್ರೋತ್ಸಾಹ ಧನಕ್ಕೆ ಅರ್ಹತೆ ಹೊಂದಿರುವ ಸಾಲಗಳಿಗೆ ಸಂಬಂಧಿಸಿದಂತೆ ಈಗಾಗಲೇ ಬಿಡುಗಡೆಯಾದ ಮೊತ್ತವನ್ನು ಕಡಿತಗೊಳಿಸಿ, ಉಳಿದ ಸಂಪೂರ್ಣ ಮೊತ್ತವನ್ನು ಒಂದೇ ಕಂತಿನಲ್ಲಿ ರೈತರ ಖಾತೆಗೆ ಬಿಡುಗಡೆ ಮಾಡಲು ಅನುಮೋದನೆ ನೀಡಿ ರಾಜ್ಯ ಸರ್ಕಾರ ಬುಧವಾರ ಮಹತ್ವದ ಆದೇಶ ಹೊರಡಿಸಿದೆ.
ಎನ್‌ಪಿಎ ಸಾಲಗಳು ಮತ್ತು ದಿನಾಂಕ 1-1-2018 ರಿಂದ ಬಡ್ಡಿ ಮೊತ್ತ ಪಾವತಿಸುವ ಬಗ್ಗೆ ಪ್ರತ್ಯೇಕವಾಗಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಈ ಆದೇಶ ತಿಳಿಸಿದೆ.
ಇನ್ನು ಸಾಲ ಮನ್ನಾ ಆದ ಬಗ್ಗೆ ದೃಢೀಕರಣ ಪತ್ರವನ್ನು ಎಲ್ಲ ಫಲಾನುಭವಿಗಳಿಗೂ ಬಿಡುಗಡೆ ಮಾಡುವುದಾಗಿ ಸರ್ಕಾರ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com