ಇನ್ನೊಂದೆಡೆ ಹೊಸದಾಗಿ ರೂಪುಗೊಂಡ ಎಸ್ ಐಟಿ ತಂಡ ಐಎಂಎ ಹಗರಣದಲ್ಲಿ ಪ್ರಮುಖ ಆರೋಪಿಗಳನ್ನು ಹುಡುಕುತ್ತಿದೆ. "ಇನ್ಸ್ ಪೆಕ್ಟರ್ ಯತಿರಾಜ್ ನೇತೃತ್ವದ ಸಿಸಿಬಿ ತಂಡ ಕಳೆದ ರಾತ್ರಿ ಮುಕರ್ರಮ್ ನನ್ನು ಬಂಧಿಸಿದೆ. ಎರಡು ತಿಂಗಳ ಕಾಲ ತಲೆಮರೆಸಿಕೊಂಡಿದ್ದ ಆತ ಹಲವಾರು ಜನರಿಗೆ ಹಲಾಲ್ ಹಣದ ಹೆಸರಿನಲ್ಲಿ ವಂಚಿಸಿದ್ದನು ಎಂದು ಆರೋಪ ಕೇಳಿಬಂದಿದೆ." ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ (ಅಪರಾಧ ದಳ) ಅಲೋಕ್ ಕುಮಾರ್ ಹೇಳಿದ್ದಾರೆ.