ಓಂಕಾರ್ ಅವರು ಯಾವುದೇ ಡೆತ್ ನೋಟ್ ಬರೆದಿಟ್ಟಿಲ್ಲ. ಆದರೆ ಅವರ ಸಹೋದ್ಯೋಗಿಗಳು ಮತ್ತು ಕುಟುಂಬಸ್ಥರು ಹೇಳುವ ಪ್ರಕಾರ ವಿಭಾಗದ ಮುಖ್ಯಸ್ಥರು ಅವರಿಗೆ ತಾಳಲಾರದ ಕಿರುಕುಳ ನೀಡುತ್ತಿದ್ದರು. ಇನ್ನು ಕೆಲವೇ ದಿನಗಳಲ್ಲಿ ಅವರ ಸೋದರಿ ಮದುವೆಯಿದ್ದು ಅದಕ್ಕೆ ಪೂರ್ವಭಾವಿಯಾಗಿ ರಜೆಗೆ ಮನವಿ ಮಾಡಿದಾಗ ರಜೆ ನೀಡಲು ಆಗುವುದಿಲ್ಲವೆಂದು ನಿರಾಕರಿಸಿದರು. ಇದರಿಂದ ಓಂಕಾರ್ ತೀವ್ರ ನೊಂದಿದ್ದರು ಎಂದು ಪೊಲೀಸರು ಹೇಳುತ್ತಾರೆ.