ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಜಮೀರ್ ಅಹ್ಮದ್ ಅವರು, ಐಎಂಎ ಹಗರಣದ ಬಗ್ಗೆ ಚರ್ಚೆ ನಡೆಸಲಾಗಿದೆ. ಈ ಪ್ರಕರಣದ ಕುರಿತು ಇದುವರೆಗೂ ನಡೆದ ತನಿಖೆಯ ಕುರಿತು ದಿನೇಶ್ ಗುಂಡೂರಾವ್ ಅವರಿಗೆ ಮಾಹಿತಿ ನೀಡಿದ್ದೇನೆ. ಇದರಲ್ಲಿ ರೋಷನ್ ಬೇಗ್ ಅವರ ಪಾತ್ರವಿದೆ ಎನ್ನುವುದಕ್ಕೆ ಸೂಕ್ತ ದಾಖಲೆಗಳು ಬೇಕು. ಧ್ವನಿ ಸುರಳಿಯಲ್ಲಿ ಮಾಜಿ ಸಚಿವರ ಹೆಸರು ಪ್ರಸ್ತಾಪಿಸಲಾಗಿದೆ. ಆದರೆ ಧ್ವನಿ ಸುರುಳಿಯನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದ್ದು, ಅದು ಮನ್ಸೂರ್ ಖಾನ್ ಧ್ವನಿ ಎನ್ನುವುದು ಸಾಬೀತಾದರೆ ರೋಷನ್ ಬೇಗ್ ಪಾತ್ರದ ಬಗ್ಗೆ ಮಾತನಾಡಬಹುದು ಎಂದು ಹೇಳಿದರು.