ಮಂಡ್ಯದ ಮಾಜಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಮಾಹಿತಿ, ಜೀವ ವಿಜ್ಞಾನ ತಂತ್ರಜ್ಞಾನ ವಿಭಾಗದ ನಿರ್ದೇಶಕರಾಗಿ ನೇಮಕವಾಗಿದ್ದಾರೆ.ಮಾಹಿತಿ, ಜೀವ ವಿಜ್ಞಾನ ತಂತ್ರಜ್ಞಾನ ವಿಭಾಗದ ನಿರ್ದೇಶಕರಾಗಿದ್ದ ಎಸ್ಎಸ್ ನಕುಲ್ ಅವರಿಗೆ ಬಳ್ಳಾರಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಬಳ್ಳಾರಿಯ ಜಿಲ್ಲಾಧಿಕಾರಿಯಾಗಿದ್ದ ರಾಮ್ ಪ್ರಶಾಂತ್ ಮನೋಹರ್ ಅವರನ್ನು ಉದ್ಯೋಗ ಮತ್ತು ತರಬೇತಿ ವಿಭಾಗದ ಆಯುಕ್ತರನ್ನಾಗಿ ನೇಮಿಸಲಾಗಿದೆ. ಅತಿ ಸಣ್ಣ, ಸಣ್ಣ, ಮಧ್ಯಮ ವ್ಯಾಪಾರ ಇಲಾಖೆ ನಿರ್ದೇಶಕರಾಗಿದ್ದ ವೃಷಬೇಂದ್ರ ಮೂರ್ತಿರೇಷ್ಮೆ ಕೃಷಿ ಅಭಿವೃದ್ಧಿ ಇಲಾಖೆಯ ನಿರ್ದೇಶಕ ಸ್ಥಾನಕ್ಕೆ ವರ್ಗಾವಣೆಗೊಂಡಿದ್ದಾರೆ. ಮಂಡ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕರನ್ನಾಗಿ ಕೆ. ಯಾಲಕ್ಕಿ ಗೌಡ ನೇಮಕವಾಗಿದ್ದಾರೆ.