ಚಿತ್ರದುರ್ಗ: ಸೆಲ್ಫಿ ವೀಡಿಯೋ ಮಾಡಿಟ್ಟು ಕೆರೆಗೆ ಹಾರಿದ ಯುವಕ ಆತ್ಮಹತ್ಯೆ

ಸೆಲ್ಫಿ ವೀಡಿಯೋ ಮಾಡಿಟ್ಟು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಪವನ್ ಕುಮಾರ್
ಪವನ್ ಕುಮಾರ್
Updated on
ಚಿತ್ರದುರ್ಗ: ಸೆಲ್ಫಿ ವೀಡಿಯೋ ಮಾಡಿಟ್ಟು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಜೀವನದಲ್ಲಿ ಜಿಗುಪ್ಸೆಗೊಂಡ ಯುವಕ ಪವನ್ ಕುಮಾರ್(20) ಸೆಲ್ಫಿ ವಿಡಿಯೋ ಮಾಡಿಟ್ಟು  ಜೋಗಿಮಟ್ಟಿ ರಸ್ತೆಯಲ್ಲಿನ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಚಾಮರಾಜನಗರ ಮೂಲದ ಈ ಯುವಕ ನಗರದ ಕಾಸಗಿ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದನೆನ್ನಲಾಗಿದೆ.
"ಚಿತ್ರದುರ್ಗದಲ್ಲಿನ ನನ್ನ ಅಕ್ಕ-ಭಾವ ನನ್ನನ್ನು ಸ್ವಂತ ಮಗನಂತೆ ನೋಡಿಕೊಂಡಿದ್ದಾರೆ. ಆದರೆ ಜೀವನದಲ್ಲಿ ನಾನು ನಂಬಿದ್ದವರಿಂದಲೇ ಮೋಸ ಹೋಗಿದ್ದೇನೆ.ಮುಂದಿನ ಜನ್ಮದಲ್ಲಿ ಒಳ್ಳೆ ಹುಡುಗನಾಗಿ ಬಾಳುತ್ತೇನೆ" ಎಂದು ವೀಡಿಯೋ ಸಂದೇಶ ಮಾಡಿದ್ದ ಯುವಕ ನೀರಿಗೆ ಹಾರಿ ಪ್ರಾಣ ಬಿಟ್ಟಿದ್ದಾನೆ.
ಗುರುವಾರ ರಾತ್ರಿ ನಡೆದ ಈ ಘಟನೆ ಶುಕ್ರವಾರ ಬೆಳಿಗ್ಗೆ ಕೆರೆಯಲ್ಲಿ ಮೃತದೇಹ ತೇಲುತ್ತಿದ್ದದ್ದನ್ನು ಕಂಡಾಗ ಬೆಳಕಿಗೆ ಬಂದಿದೆ. ಆತನ ಮೊಬೈಲ್ ಸಿಮ್ ಹಾಸನ ಜಿಲ್ಲೆ ಅರಕಲಗೂಡಿನ ವಿಳಾಸದಲ್ಲಿದೆ.
ಘಟನೆ ಕುರಿತು ಕೋಟೆ ಠಾಣೆ ಪೋಲೀಸರು ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com