ನಗರದಲ್ಲಿ ನಡೆದ ಕೃತಜ್ಞತಾ ಸಭೆಯಲ್ಲಿ ಮಾತನಾಡಿದ ಮಧುಬಂಗಾರಪ್ಪ, ಶಿವಮೊಗ್ಗ ಮತದಾರರು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಿದ್ದಾರೆ. ವಿಐಎಸ್ಎಲ್ ಕಾರ್ಖಾನೆಯನ್ನು ಮುಚ್ಚಲು ಕೇಂದ್ರ ಸರ್ಕಾರ ಮುಂದಾಗಿದೆ. ಜಿಲ್ಲೆಯ ಪ್ರಮುಖ ಸಮಸ್ಯೆಯಾದ ಬಗರ್ ಹುಕುಂ ಹಾಗೂ ಅರಣ್ಯ ಭೂಮಿ ಹಕ್ಕು ಸಮಸ್ಯೆಗಳ ಬಗ್ಗೆ ಸಂಸದ ರಾಘವೇಂದ್ರ ಅವರು ಯಾವ ಕ್ರಮ ಕೈಗೊಳ್ಳುತ್ತಾರೆ ಎಂಬುವುದು ಗೊತ್ತಿಲ್ಲ.