ಮಳೆ ಹಿನ್ನೆಲೆ: ನಾಳಿನ ಸಿಎಂ ಎಚ್ ಡಿಕೆ ಗ್ರಾಮವಾಸ್ತವ್ಯ ರದ್ದು

ಮಳೆ ಹಿನ್ನೆಲೆಯಲ್ಲಿ ಸಿಎಂ ಎಚ್.ಡಿ. ಕುಮಾರಸ್ವಾಮಿಯವರ ನಾಳಿನ ಗ್ರಾಮ ವಾಸ್ತವ್ಯ ಕಾರ್ಯಕ್ರಮ ರದ್ದಾಗಿದೆ.
ಎಚ್.ಡಿ. ಕುಮಾರಸ್ವಾಮಿ
ಎಚ್.ಡಿ. ಕುಮಾರಸ್ವಾಮಿ
Updated on
ಯಾದಗಿರಿ: ಮಳೆ ಹಿನ್ನೆಲೆಯಲ್ಲಿ ಸಿಎಂ ಎಚ್.ಡಿ. ಕುಮಾರಸ್ವಾಮಿಯವರ ನಾಳಿನ ಗ್ರಾಮ ವಾಸ್ತವ್ಯ ಕಾರ್ಯಕ್ರಮ ರದ್ದಾಗಿದೆ.
ನಾಳೆ ಹೆರೂರು ಗ್ರಾಮದಲ್ಲಿ ನಿಗದಿಯಾಗಿದ್ದ ಗ್ರಾಮ ವಾಸ್ತವ್ಯ ರದ್ದಾಗಿದೆ. ಕಲಬುರ್ಗಿ ಜಿಲ್ಲೆ ಅಫಜಲಪುರ ತಾಲೂಕಿನ ಹೆರೂರು ಬಿ ಗ್ರಾಮದಲ್ಲಿ ನಾಳೆ ಸಿಎಂ ಗ್ರಾಮವಾಸ್ತವ್ಯ ನಿಗದಿಯಾಗಿತ್ತು.
ಆದರೆ ಮಳೆಯ ಕಾರಣದಿಂದ ನಾಳಿನ ಗ್ರಾಮ ವಾಸ್ತವ್ಯ, ಜನತಾ ದರ್ಶನ ರದ್ದಾಗಿದೆ ಎಂದು ತಿಳಿದುಬಂದಿದೆ. ಕಲಬುರ್ಗಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗಿರುವ ಕಾರಣ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಮುಂದೂಡಲಾಗಿದೆ.
ಇದೇ ವೇಳೆ ಇಂದು ಯಾದಗಿರಿ ಜಿಲ್ಲೆ ಗುರುಮಠಕಲ್ ತಾಲೂಕಿನ ಚಂಡರಕಿಯಲ್ಲಿ ಗ್ರಾಮವಾಸ್ತವ್ಯ ಮಾಡಿದ್ದ ಕುಮಾರಸ್ವಾಮಿ ಜನರ ಅಹವಾಲುಗಳನ್ನು ಆಲಿಸಿದ ನಂತರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರು, ವಿದ್ಯಾರ್ಥಿಗಳೊಡನೆ ಊಟ ಮಾಡಿದ್ದಾರೆ. ಬಳಿಕ ಶಾಲಾ ಕೊಠಡಿಯಲ್ಲೇ ನಿದ್ರೆಗೆ ಜಾರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com