ಸಭೆಯಲ್ಲಿ ಹಾಜರಿದ್ದ ಬೊಮ್ಮನಹಳ್ಳಿ ಶಾಸಕ ಸತೀಶ್ರೆಡ್ಡಿ, ಬನ್ನೇರುಘಟ್ಟ ರಸ್ತೆ, ಸರ್ಜಾಪುರ ರಸ್ತೆ, ಬೇಗೂರು ರಸ್ತೆ ವಿಸ್ತರಣೆ ಯೋಜನೆಗೆ ಭೂಮಿ ನೀಡಲು ಜನರ ಮನವೊಲಿಸಿದ್ದೇವೆ. ಆದರೆ, ಅವರಿಗೆ ಟಿಡಿಆರ್ ವಿತರಿಸಲು ಅಧಿಕಾರಿಗಳು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ. ಇದರಿಂದ ಯೋಜನೆ ವಿಳಂಬವಾಗುತ್ತಿದ್ದು, ಬನ್ನೇರುಘಟ್ಟ ರಸ್ತೆ ವಿಸ್ತರಣೆಗೆ ಮೊದಲಿದ್ದ 150 ಕೋಟಿ ರೂ. ಯೋಜನಾ ವೆಚ್ಚ ಈಗ 200 ಕೋಟಿ ರೂ.ಗಳಿಗೆ ಏರಿಕೆಯಾಗಿದೆ. ಇದರಿಂದ ಪಾಲಿಕೆಗೆ 50 ಕೋಟಿ ರೂ. ಹೊರೆಯಾಗಿದೆ ಎಂದು ಆರೋಪಿಸಿದರು.