ಇಂದು ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡು ಸರ್ಕಾರ ಬಿಳಿಗುಂಡ್ಲು ಸೇರಿದಂತೆ ಎಲ್ಲಿ ಬೇಕಾದರೂ ಅಣೆಕಟ್ಟು ಕಟ್ಟಲಿ, ಅದಕ್ಕೆ ವಿರೋಧ ವ್ಯಕ್ತಪಡಿಸದೇ ಸಂಪೂರ್ಣ ಸಹಕಾರ ನೀಡುತ್ತೇವೆ. ಸಮುದ್ರಕ್ಕೆ ಹರಿದುಹೋಗುವ ನೀರನ್ನು ಅವರು ಬಳಸಿಕೊಳ್ಳುವುದಕ್ಕೆ ಯಾವುದೇ ವಿರೋಧವಿಲ್ಲ. ಆದರೆ ತಮಿಳುನಾಡು ಸರ್ಕಾರ ಮೇಕೆದಾಟು ಯೋಜನೆಗೆ ಸಹಕಾರ ನೀಡಬೇಕು. ಈ ಯೋಜನೆಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ನಡೆಸಲಾಗಿದ್ದು, ಇದಕ್ಕೆ ತೊಂದರೆ ಮಾಡಬಾರದು ಎಂದು ಅವರು ಮನವಿ ಮಾಡಿದರು.