ಮೀಸಲಾತಿ ಅಡಿಯಲ್ಲಿ ಬಡ್ತಿ ಪಡೆದಿರುವ ಪರಿಶಿಷ್ಟ ಜಾತಿ, ಪಂಗಡದ ಸರ್ಕಾರಿ ನೌಕರರಿಗೆ ಸಾಂದರ್ಭಿಕ ಹಿರಿತನ ಒದಗಿಸಿಕೊಡುವ ಉದ್ದೇಶದಿಂದ ರಾಜ್ಯ ಸರ್ಕಾರ 2002ರಲ್ಲಿ ‘ಸರ್ಕಾರಿ ನೌಕರರ ಮೀಸಲಾತಿ ಆಧಾರಿತ ಬಡ್ತಿ ನೌಕರರ ಜೇಷ್ಠತೆ ನಿರ್ಣಯ ಕಾಯ್ದೆ’ ರೂಪಿಸಿತ್ತು. ಈ ಕಾಯ್ದೆಯನ್ನು ಪ್ರಶ್ನಿಸಿ ಕೆಲವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಈ ವಿಚಾರಕ್ಕೆ ಸಂಬಂಧಿಸಿದ ಹಲವು ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ 2006ರಲ್ಲಿ ಎಲ್ಲ ಅರ್ಜಿಗಳನ್ನು ಹೈಕೋರ್ಟ್ ಗಳಿಗೆ ಮರಳಿಸಿ, ಮರು ವಿಚಾರಣೆ ನಡೆಸುವಂತೆ ಸೂಚಿಸಿತ್ತು.