ನಗರ ವಸತಿ ಯೋಜನೆಯಡಿ 40 ಸಾವಿರ ಅರ್ಜಿಗಳು; ಮುಖ್ಯಮಂತ್ರಿ ಕುಮಾರಸ್ವಾಮಿ

ನಗರದಲ್ಲಿ ಬಡ ಜನತೆಗೆ ಒಂದು ಲಕ್ಷ ಮನೆ ನಿರ್ಮಿಸುವ ನಗರ ವಸತಿ ಯೋಜನೆಗೆ ರಾಜ್ಯ ಸರ್ಕಾರ 40 ಸಾವಿರಕ್ಕೂ ...
ನಗರ ವಸತಿ ಯೋಜನೆಯ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿದ ಸಿಎಂ ಹೆಚ್ ಡಿ ಕುಮಾರಸ್ವಾಮಿ
ನಗರ ವಸತಿ ಯೋಜನೆಯ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಿದ ಸಿಎಂ ಹೆಚ್ ಡಿ ಕುಮಾರಸ್ವಾಮಿ
Updated on
ಬೆಂಗಳೂರು; ನಗರದಲ್ಲಿ ಬಡ ಜನತೆಗೆ ಒಂದು ಲಕ್ಷ ಮನೆ ನಿರ್ಮಿಸುವ ನಗರ ವಸತಿ ಯೋಜನೆಗೆ ರಾಜ್ಯ ಸರ್ಕಾರ 40 ಸಾವಿರಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಿದೆ ಎಂದು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಬೆಂಗಳೂರು ನಗರದಲ್ಲಿ ಸರ್ಕಾರದ ನಗರ ವಸತಿ ಯೋಜನೆಯ ಸುಮಾರು 10 ಸಾವಿರ ಫಲಾನುಭವಿಗಳಿಗೆ ಹಕ್ಕು ಪತ್ರವನ್ನು ವಿತರಿಸಿ ಅವರು ಮಾತನಾಡಿದರು. ನಗರ ಗೃಹ ಯೋಜನೆಯಡಿ ಬಡವರಿಗೆ ಸೂರು ನಿರ್ಮಾಣಕ್ಕೆ ಕಂದಾಯ ಇಲಾಖೆಯಿಂದ ಒಟ್ಟು 1,600 ಎಕರೆ ಜಮೀನನ್ನು ರಾಜೀವ್ ಗಾಂಧಿ ಹೌಸಿಂಗ್ ಕಾರ್ಪೊರೇಷನ್ ಗೆ ವರ್ಗಾಯಿಸಲಾಗಿದೆ. ಸರ್ಕಾರ ಭೂಮಿ ಮತ್ತು ಸುಮಾರು 3 ಲಕ್ಷ ಮನೆಗಳನ್ನು ನಿರ್ಮಿಸುವುದಲ್ಲದೆ 4 ಲಕ್ಷದವರೆಗೆ ಸಾಲ ನೀಡಲು ಖಾತ್ರಿದಾರನಾಗಿ ಸಹಿ ಹಾಕಲಿದೆ ಎಂದರು.
ತಮ್ಮ ವಾಸಸ್ಥಾನಗಳನ್ನು ಸಕ್ರಮಗೊಳಿಸುವಂತೆ ಕೊಳಚೆ ನಿವಾಸಿಗಳು ಪದೇ ಪದೇ ಮನವಿ ಮಾಡುತ್ತಿದ್ದು ಈ ಕುರಿತು ರಾಜ್ಯ ಸರ್ಕಾರ ಎಲ್ಲಾ ಕಾನೂನುಗಳನ್ನು ಪರಿಶೀಲಿಸುತ್ತಿದೆ. ಸ್ಥಳೀಯರ ಮನೆಗಳನ್ನು ಖಾಯಂಗೊಳಿಸುವ ಬಗ್ಗೆ ಪ್ರಕ್ರಿಯೆ ಮುಂದುವರಿದಿದೆ ಎಂದರು.
ಕಂದಾಯ ಭೂಮಿಯಲ್ಲಿ ವಾಸಿಸುತ್ತಿರುವ ನಿವಾಸಿಗಳ ಹಕ್ಕುಪತ್ರವನ್ನು ಸಕ್ರಮಗೊಳಿಸುವ ಕಾರ್ಯ ನಡೆಯುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಇಲ್ಲಿಯವರೆಗೆ 1.11 ಲಕ್ಷ ಹಕ್ಕು ಪತ್ರಗಳನ್ನು ವಿತರಿಸಲಾಗಿದ್ದು 81,305 ದಾಖಲೆಗಳ ಪರಿಶೀಲನೆ ಕಾರ್ಯ ನಡೆಯುತ್ತಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com