ಮನೆ ಬಾಗಿಲಿಗೆ ಸರ್ಕಾರಿ ಸೇವೆ; ಮುಖ್ಯಮಂತ್ರಿ ಕುಮಾರಸ್ವಾಮಿ

ರಾಜ್ಯ ಸರ್ಕಾರ ವಿನೂತನ ಯೋಜನೆಯಾದ “ಜನ ಸೇವಕ - ನಾಗರಿಕರ ಮನೆಬಾಗಿಲಿಗೆ ಸರ್ಕಾರದ ...
ಸ್ಥಳೀಯರೊಬ್ಬರ ಮೋಟಾರ್  ಸೈಕಲ್ ಮೇಲೆ ಕುಳಿತು ಸವಾರಿ ಮಾಡಿದ ಸಿಎಂ ಹೆಚ್ ಡಿ ಕುಮಾರಸ್ವಾಮಿ
ಸ್ಥಳೀಯರೊಬ್ಬರ ಮೋಟಾರ್ ಸೈಕಲ್ ಮೇಲೆ ಕುಳಿತು ಸವಾರಿ ಮಾಡಿದ ಸಿಎಂ ಹೆಚ್ ಡಿ ಕುಮಾರಸ್ವಾಮಿ
Updated on
ಬೆಂಗಳೂರು: ರಾಜ್ಯ ಸರ್ಕಾರ ವಿನೂತನ ಯೋಜನೆಯಾದ “ಜನ ಸೇವಕ - ನಾಗರಿಕರ ಮನೆಬಾಗಿಲಿಗೆ ಸರ್ಕಾರದ ಸೇವೆಗಳು” ಯೋಜನೆಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಬೆಂಗಳೂರಿನ ಬಾಗಲಗುಂಟೆಯಲ್ಲಿ ಮನೆ ಮನೆ ತೆರಳಿ ಚಾಲನೆ ನೀಡಿದರು.
ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ಈ ಯೋಜನೆಯನ್ನು ಮುಖ್ಯಮಂತ್ರಿಗಳು ಸ್ಥಳೀಯರೊಬ್ಬರ ಮೋಟಾರ್  ಸೈಕಲ್ ಮೇಲೆ ಕುಳಿತು ಹಲವಾರು ಮನೆಗಳಿಗೆ ತೆರಳಿ ಯೋಜನೆಯ ಲಾಭ ಪಡೆಯುವಂತೆ ಕೋರಿದರು.
ಈ ಸಂದರ್ಭದಲ್ಲಿ ನಾಗರಿಕರೊಂದಿಗೆ ಮಾತನಾಡಿದ ಅವರು, “ಈ ಯೋಜನೆಯಡಿ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಬಿ.ಬಿ.ಎಂ.ಪಿ ಖಾತಾ ಸೇವೆಗಳು, ಹಿರಿಯ ನಾಗರಿಕರ ಕಾರ್ಡ್ ಮತ್ತು ಆರೋಗ್ಯ ಕಾರ್ಡ್ ಮುಂತಾದ ಸೇವೆಗಳನ್ನು ಪಡೆಯಬಹುದಾಗಿದ್ದು, ಸಹಾಯವಾಣಿ ಸಂಖ್ಯೆ: 080-44554455 ದೂರವಾಣೆ ಕರೆ ಮಾಡಿದರೆ ಸಾಕು ನಾಗರಿಕರು ಕೋರಿದ ಸೇವೆಗಳನ್ನು ಸಮಯ ಬದ್ಧವಾಗಿ ಹಾಗೂ ಗುಣಾತ್ಮಕವಾಗಿ ವಿಲೇವಾರಿ ಮಾಡಲಾಗುವುದು” ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com