
ಬೆಂಗಳೂರು: ರಾಜ್ಯದಲ್ಲಿ ಭಯೋತ್ಪಾದಕ ಚಟುವಟಿಕೆಗಳ ಮೇಲೆ ನಿಗಾವಹಿಸಲು ರಾಜ್ಯದ ಐದು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಭಯೋತ್ಪಾದನೆ ನಿಗ್ರಹ ಪಡೆ ರಚಿಸಲು ಪೊಲೀಸರು ನಿರ್ಧರಿಸಿದ್ದಾರೆ.
ಬೆಂಗಳೂರು, ಮೈಸೂರು, ಬೆಳಗಾವಿ, ಮಂಗಳೂರು ಹಾಗೂ ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಸದ್ಯದಲ್ಲೇ ತಲಾ ಒಂದೊಂದು ಭಯೋತ್ಪಾದನೆ ನಿಗ್ರಹ ದಳವನ್ನು ರಚಿಸಲಾಗುತ್ತಿದೆ.
Advertisement