ಈಗಲ್ಟನ್ ರೆಸಾರ್ಟ್ ಪ್ರಕರಣ: ಕಂಪ್ಲಿ ಶಾಸಕ ಗಣೇಶ್ ನ್ಯಾಯಾಂಗ ಬಂಧನ ವಿಸ್ತರಣೆ

ಈಗಲ್ಟನ್ ರೆಸಾರ್ಟ್ ನಲ್ಲಿ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಕಂಪ್ಲಿ ಶಾಸಕ ಜೆ.ಎನ್. ಗಣೇಶ್ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆಯಾಗಿದೆ
ಕಂಪ್ಲಿ ಶಾಸಕ ಜೆ.ಎನ್. ಗಣೇಶ್
ಕಂಪ್ಲಿ ಶಾಸಕ ಜೆ.ಎನ್. ಗಣೇಶ್
Updated on
ರಾಮನಗರ: ಈಗಲ್ಟನ್ ರೆಸಾರ್ಟ್ ನಲ್ಲಿ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ  ಕಂಪ್ಲಿ ಶಾಸಕ ಜೆ.ಎನ್. ಗಣೇಶ್ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆಯಾಗಿದೆ. ರಾಮನಗರ ಜಿಲ್ಲಾ ಸಿಜೀಂ ನ್ಯಾಯಾಲಯ ಗಣೇಶ್ ನ್ಯಾಯಾಂಗ ಬಂಧನ ಅವಧಿಯನ್ನು ಮಾರ್ಚ್ 19ರವರೆಗೆ ವಿಸ್ತರಿಸಿ ಆದೇಶಿಸಿದೆ.
ಬುಧವಾರ ಕಂಪ್ಲಿ ಗಣೇಶ್ 14 ದಿನಗಳ ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾಗಿತ್ತು.  ಆದರೆ ಅನಾರೋಗ್ಯದ ನಿಮಿತ್ತ ಶಾಸಕ ಇಂದಿನ ವಿಚಾರಣೆಗೆ ಹಾಜರಾಗಿಲ್ಲ. ಹಾಗಾಗಿ ನ್ಯಾಯಾಲಯ ಗಣೇಶ್ ನ್ಯಾಯಾಂಗ ಬಂಧನವನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಿದೆ.
ಜನವರಿ 20ರಂದು ಬಿಡದಿ ಸಮೀಪದ ಈಗಲ್ಟನ್ ರೆಸಾರ್ಟ್ ನಲ್ಲಿ ನಡೆದ ಜಗಳದ ವೇಳೆ ಕಂಪ್ಲಿ ಶಾಸಕ ಗಣೇಶ್, ವಿಜಯನಗರ ಶಾಸಕರಾದ ಆನಂದ್ ಸಿಂಗ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಹಲ್ಲೆ ಬಳಿಕ ತಿಂಗಳ ಕಾಲ ನಾಪತ್ತೆಯಾಗಿದ್ದ ಗಣೇಶ್ ಅವರನ್ನು ಗುಜರಾತಿನಲ್ಲಿ ಫೆ. 20ರಂದು ಬಂಧಿಸಲಾಗಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com