ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ ಅವರು, ಕಳೆದ ಮೂರ್ನಾಲ್ಕು ದಿನಗಳಿಂದ ಈ ಘಟನೆಯಿಂದಾಗಿ ತಮ್ಮ ಕುಟುಂಬದವರಿಗೆ ಮಾನಸಿಕವಾಗಿ ಆಘಾತವಾಗಿದ್ದು ತಮ್ಮ ತಾಯಿ ಅನಾರೋಗ್ಯಕ್ಕೀಡಾಗಿದ್ದಾರೆ. ಎಬಿವಿಪಿ ಕಾರ್ಯಕರ್ತರಿಗೆ ಒಂದು ಪಾಠ ಕಲಿಸಬೇಕೆಂದು ನಾನು ಪೊಲೀಸರಿಗೆ ದೂರು ನೀಡಿದ್ದೇನೆ. ನಾನು ಯಾವುದೇ ದೇಶ ವಿರೋಧಿ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿಲ್ಲ. ಎರಡೂ ದೇಶಗಳ ಮಧ್ಯೆ ಶಾಂತಿ ಸ್ಥಾಪನೆಯನ್ನು ಬಯಸಿ ನಾನು ಪೋಸ್ಟ್ ಹಾಕಿದ್ದೆ. ಸೋಷಿಯಲ್ ಮೀಡಿಯಾದಲ್ಲಿ ನಾನು ಈ ಹೇಳಿಕೆ ಪ್ರಕಟಿಸಿದ ದಿನದಿಂದ ಕೆಲ ಎಬಿವಿಪಿ ಕಾರ್ಯಕರ್ತರು ಕಾಲೇಜಿನ ಹೊರಗೆ ಗಲಾಟೆ ಎಬ್ಬಿಸುತ್ತಿದ್ದಾರೆ ಎಂದರು.