ನ್ಯಾಯಮೂರ್ತಿ ರವಿ ಮಳಿಮಠ ಅವರಿದ್ದ ನ್ಯಾಯಪೀಠ, ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ನಿವಾಸಿ ಕೆ ಎಲ್ ಪ್ರವೀಣ್ ಬಾಬು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಕಳೆದ ಕೆಲ ವರ್ಷಗಳಿಂದ ಮಲ್ಲೇಶ್ವರ ಕೇಂದ್ರೀಯ ವಿದ್ಯಾಲಯದಲ್ಲಿ ವಿವಿಧ ತರಗತಿಗಳಿಗೆ ಪ್ರವೇಶ ಬಯಸಿ ಕೋರಿ ಬರುವ ಅರ್ಜಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಕಳೆದ ವರ್ಷದಿಂದ ವಿದ್ಯಾಲಯದಲ್ಲಿ ಅಧಿಕಾರಿಗಳು ಮೊದಲ ಶಿಫ್ಟ್ ಜೊತೆಗೆ ಎರಡನೇ ಶಿಫ್ಟ್ ಆರಂಭಿಸಿದ್ದರು.