ಅತ್ಯುತ್ತಮ ಫಲಿತಾಂಶಕ್ಕೆ ಶಿಕ್ಷಕರ ಪಣ; ಸರ್ಕಾರಿ ಶಾಲೆಗಳ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ರಾತ್ರಿ ಕೂಡ ಕ್ಲಾಸ್!

ಹತ್ತನೇ ತರಗತಿ, ಪಿಯುಸಿ ವಿದ್ಯಾರ್ಥಿಗಳ ಜೀವನದಲ್ಲಿ ಮಹತ್ವದ ಘಟ್ಟ. ಈ ಬಾರಿ ಮಾರ್ಚ್ 21ರಿಂದ...
ಚಿಕ್ಕಮಗಳೂರಿನ ಬೊಗಸೆ ಗ್ರಾಮದಲ್ಲಿ ಸರ್ಕಾರಿ ಶಾಲೆಯಲ್ಲಿ ರಾತ್ರಿ ವೇಳೆ ಅಧ್ಯಯನದಲ್ಲಿ ತೊಡಗಿರುವ ಎಸ್ಎಸ್ ಎಲ್ ಸಿ ವಿದ್ಯಾರ್ಥಿಗಳು
ಚಿಕ್ಕಮಗಳೂರಿನ ಬೊಗಸೆ ಗ್ರಾಮದಲ್ಲಿ ಸರ್ಕಾರಿ ಶಾಲೆಯಲ್ಲಿ ರಾತ್ರಿ ವೇಳೆ ಅಧ್ಯಯನದಲ್ಲಿ ತೊಡಗಿರುವ ಎಸ್ಎಸ್ ಎಲ್ ಸಿ ವಿದ್ಯಾರ್ಥಿಗಳು
Updated on
ಬೆಂಗಳೂರು: ಹತ್ತನೇ ತರಗತಿ, ಪಿಯುಸಿ ವಿದ್ಯಾರ್ಥಿಗಳ ಜೀವನದಲ್ಲಿ ಮಹತ್ವದ ಘಟ್ಟ. ಈ ಬಾರಿ ಮಾರ್ಚ್ 21ರಿಂದ ಎಸ್ಎಸ್ ಎಲ್ ಸಿ  ಪರೀಕ್ಷೆ ಆರಂಭವಾಗುತ್ತಿದೆ. ಹೀಗೆಂದು ಸರ್ಕಾರಿ ಶಾಲೆಯ ಶಿಕ್ಷಕರು ಹತ್ತನೇ ತರಗತಿ ಮಕ್ಕಳನ್ನು ಹಗಲು-ರಾತ್ರಿ ಶಾಲೆಯಲ್ಲಿ ಕುಳ್ಳಿರಿಸಿ ಓದಿಸಿ ತಮ್ಮ ಶಾಲೆಯ ಫಲಿತಾಂಶ ಖಾಸಗಿ ಮತ್ತು ಅನುದಾನಿತ ಶಾಲೆಗಳ ಫಲಿತಾಂಶ ಸಮನಾಗಿ ಬರಬೇಕು ಎಂದು ಪಣತೊಟ್ಟಿದ್ದಾರೆ.
ತಡರಾತ್ರಿಯವರೆಗೆ ಮಕ್ಕಳನ್ನು ಕುಳ್ಳಿರಿಸಿ ಓದಿಸಿ ಬೆಳಗ್ಗೆ ಬೇಗನೆ ಎಬ್ಬಿಸುವ ಕೆಲಸ ಅಲ್ಲಲ್ಲಿ ಸರ್ಕಾರಿ ಶಾಲೆಗಳಲ್ಲಿ ನಡೆಯುತ್ತಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ಶಿಕ್ಷಕ-ಶಿಕ್ಷಕಿಯರು ಮನೆ ಮನೆಗೆ ಬೆಳ್ಳಂಬೆಳಗ್ಗೆ ಹೋಗಿ ಮಕ್ಕಳಿಗೆ ಓದುವಂತೆ ಪ್ರೇರೇಪಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ಸಾಯಂಕಾಲದವರೆಗೆ ಶಿಕ್ಷಕರು ತರಗತಿಯನ್ನು ತೆಗೆದುಕೊಂಡು ಬೆಳಗ್ಗೆ ಕೂಡ ಬೇಗನೆ ಶಾಲೆಗೆ ಕರೆತರುತ್ತಾರೆ.
ಬೆಂಗಳೂರಿನ ಹೆಬ್ಬಾಳದ ಸರ್ಕಾರಿ ಹೈಸ್ಕೂಲ್ ನ ಶಿಕ್ಷಕ ಮಂಜುನಾಥ್, ಶಾಲಾ ಅವಧಿ ಮುಗಿದ ನಂತರವೂ ನಾವು ತರಗತಿಗಳನ್ನು ತೆಗೆದುಕೊಳ್ಳುತ್ತೇವೆ. ಸಾಯಂಕಾಲ 6.45ರವರೆಗೆ ಶಾಲೆ ತೆಗೆದುಕೊಳ್ಳುತ್ತೇವೆ. ಇದಕ್ಕೆ ಪೋಷಕರ ಒಪ್ಪಿಗೆ ಕೂಡ ಇದೆ. ಹೀಗೆ ಮಕ್ಕಳಿಗೆ ಹೇಳಿಕೊಡುವ ಮುನ್ನ ಶಾಲಾ ಅಭಿವೃದ್ಧಿ ಮತ್ತು ನಿರ್ವಹಣೆ ಸಮಿತಿಯ ಜೊತೆ ಸಭೆ ನಡೆಸಿ ಪೋಷಕರ ಜೊತೆ ಚರ್ಚಿಸಿ ನಿರ್ಧಾರ ತೆಗೆದುಕೊಂಡೆವು. ಪೋಷಕರ ಒಪ್ಪಿಗೆಯಿರುವುದು ನಮಗೆ ಖುಷಿಯೇ ಎನ್ನುತ್ತಾರೆ. ಬೆಂಗಳೂರಿನ ರಾಜಾನುಕುಂಟೆಯ ಸರ್ಕಾರಿ ಶಾಲೆಯಲ್ಲಿ 48 ಮಕ್ಕಳಿದ್ದು ಪ್ರತಿ ಶಿಕ್ಷಕರು 10 ಮಕ್ಕಳಿಗೆ ವಿಶೇಷ ತರಗತಿಗಳನ್ನು ತೆಗೆದುಕೊಳ್ಳುತ್ತಾರೆ ಎಂದರು.
ಇಂಗ್ಲಿಷ್ ಪ್ರಾಧ್ಯಾಪಕ ವೆಂಕಟೇಶ್ ಕೆ ಎಂ, ಶಾಲಾ ಅವಧಿ ಮುಗಿದ ನಂತರ ಹೆಚ್ಚುವರಿ ತರಗತಿಗಳನ್ನು ತೆಗೆದುಕೊಳ್ಳುತ್ತೇವೆ, ಶಾಲೆಯಲ್ಲಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಮತ್ತು ಸಾಯಂಕಾಲ ಸ್ನ್ಯಾಕ್ಸ್ ಕೊಡುತ್ತೇವೆ ಎಂದರು. ವಿದ್ಯಾನಗರದ ಸರ್ಕಾರಿ ಹೈಸ್ಕೂಲ್ ನ ಕನ್ನಡ ಶಿಕ್ಷಕ ಗೋಪಾಲಕೃಷ್ಣ ಜಿ ಕೆ, ನಮ್ಮಲ್ಲಿ ಹತ್ತನೇ ತರಗತಿಯಲ್ಲಿ ಸುಮಾರು 60 ಮಕ್ಕಳಿದ್ದು ಕಳೆದ ವರ್ಷ ಹತ್ತನೇ ತರಗತಿಯಲ್ಲಿ ಶೇಕಡಾ 93ರಷ್ಟು ಮತ್ತು ಈ ವರ್ಷ ಶೇಕಡಾ 100ರಷ್ಟು ಫಲಿತಾಂಶ ನಿರೀಕ್ಷಿಸುತ್ತಿದ್ದೇವೆ ಎಂದರು.
ಇನ್ನು ಚಿಕ್ಕಮಗಳೂರಿನ ಬೊಗಸೆ ಕುಗ್ರಾಮದ ಸರ್ಕಾರಿ ಹೈಸ್ಕೂಲ್ ನಲ್ಲಿ ಶಿಕ್ಷಕರು ಕಳೆದ ಮೂರು ತಿಂಗಳಿನಿಂದ ಮಕ್ಕಳಿಗೆ ರಾತ್ರಿ ಶಾಲೆಯನ್ನು ನಡೆಸುತ್ತಿದ್ದಾರೆ. ಕಳೆದ ವರ್ಷ ನಮ್ಮ ಶಾಲೆಗೆ ಶೇಕಡಾ 100ರಷ್ಟು ಫಲಿತಾಂಶ ಬಂದಿದ್ದು ಈ ವರ್ಷ ಅದನ್ನು ಕಾಪಾಡಬೇಕು, ಇದಕ್ಕಾಗಿ ಸಂಜೆ 6 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ಎಸ್ಎಸ್ಎಲ್ ಸಿ ಮಕ್ಕಳಿಗೆ ತರಗತಿ ತೆಗೆದುಕೊಳ್ಳುತ್ತೇವೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com