ಬುಧವಾರ ಮುಂಜಾನೆ ಪ್ರಕರಣ ವಿಚಾರಣೆಗೆ ಬಂದಾಗ, ಕಾಶಪ್ಪನವರ ಪರ ವಕೀಲರು , ಅವರು ಶೌಚಾಲಯಕ್ಕೆ ಹೋಗಿದ್ದಾರೆ. ವಿಚಾರಣೆಯನ್ನು ಸ್ವಲ್ಪ ಕಾಲ ಮುಂದೂಡಿ ಎಂದು ಮನವಿ ಮಾಡಿದರು. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶ ರಾಮಚಂದ್ರ ಡಿ ಹುದ್ದಾರ ವಿಚಾರಣೆಯನ್ನು ಮಧ್ಯಾಹ್ನ 1.45ಕ್ಕೆ ಮುಂದೂಡಿದರು. ಪ್ರಕರಣ ಮರು ವಿಚಾರಣೆಗೆ ಬಂದಾಗ ಪ್ರಕರಣದ ಪರ, ವಿರೋಧಿ ವಕೀಲರು ಕೂಡ ಹಾಜರಿರದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಮತ್ತೆ ಮಧ್ಯಾಹ್ನ 3ಕ್ಕೆ ಮುಂದೂಡಿದರು.