ಕೂಡಲ ಸಂಗಮ ಹಾಗೂ ಬಸವ ಕಲ್ಯಾಣದಲ್ಲಿ ಶರಣ ಧರ್ಮ ಪ್ರಚಾರಕ್ಕಾಗಿ ಪ್ರತಿ ವರ್ಷ ಶರಣ ಸಮ್ಮೇಳನ ಹಮ್ಮಿಕೊಳ್ಳುತ್ತಿದ್ದರು. ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟದಲ್ಲಿ ನೇತೃತ್ವ ವಹಿಸಿದ್ದ ಮಾತೆ ಮಹಾದೇವಿ, ಭಾರಿ ವಿವಾದಕ್ಕೆ ಸಿಲುಕಿದ್ದರು. ಪ್ರತ್ಯೇಕ ಲಿಂಗಾಯತ ಧರ್ಮ ಆಗುವವರೆಗೂ ಯಾವುದೇ ಕಾರಣಕ್ಕೂ ಹೋರಾಟ ನಿಲ್ಲಿಸುವುದಿಲ್ಲ ಎಂಬ ಶಪಥ ಮಾಡಿದ್ದರು. ಇದಕ್ಕೆ ತಮ್ಮದೇ ಧರ್ಮದವರಿಂದ ವಿರೋಧವನ್ನು ಕೂಡ ಎದುರಿಸಿದ್ದರು.