ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಪತಿ ಮೇಲೆ ಹಲ್ಲೆ; ಪತ್ನಿ ಮತ್ತು ಪ್ರಿಯಕರ ಬಂಧನ

ಪರ್ಸ್ ಮತ್ತು ಫೋನ್ ಮರೆತು ಬಂದಿದ್ದನ್ನು ಮತ್ತೆ ತೆಗೆದುಕೊಳ್ಳಲು ಮನೆಗೆ ಹೋದಾಗ ಪತ್ನಿ ಮತ್ತು ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಬೆಂಗಳೂರು: ಪರ್ಸ್ ಮತ್ತು ಫೋನ್ ಮರೆತು ಬಂದಿದ್ದನ್ನು ಮತ್ತೆ ತೆಗೆದುಕೊಳ್ಳಲು ಮನೆಗೆ ಹೋದಾಗ ಪತ್ನಿ ಮತ್ತು ಆಕೆಯ ಪ್ರಿಯಕರನಿಂದ ಪತಿಗೆ ಥಳಿಸಿದ ಘಟನೆ ನಗರದಲ್ಲಿ ನಡೆದಿದೆ.
ಈ ವಿಷಯವನ್ನು ದೊಡ್ಡದು ಮಾಡಿದರೆ ಕೊಲ್ಲುವುದಾಗಿ ಸಹ ಪತ್ನಿ ಮತ್ತು ಪ್ರಿಯಕರ ಬೆದರಿಕೆ ಹಾಕಿದ್ದಾರೆ. ಈ ಸಂಬಂಧ ಪತಿ ಪೊಲೀಸರಿಗೆ ದೂರು ಸಲ್ಲಿಸಿದ ನಂತರ ಅವರನ್ನು ಬಂಧಿಸಲಾಯಿತು.
ಕೋಣನಕುಂಟೆಯ ಗಣಪತಿಪುರ ನಿವಾಸಿ 33 ವರ್ಷದ ರಮೇಶ್ (ಹೆಸರು ಬದಲಿಸಲಾಗಿದೆ) ಮತ್ತು ಸಂಧ್ಯಾ(ಹೆಸರು ಬದಲಿಸಲಾಗಿದೆ) ಕೆಲ ವರ್ಷಗಳ ಹಿಂದೆ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಮೊನ್ನೆ ಮಾರ್ಚ್ 10ರಂದು ರಾತ್ರಿ ಸುಮಾರು 8.30ಕ್ಕೆ ರಮೇಶ್ ಮದುವೆ ರಿಸೆಪ್ಷನ್ ಗೆ ಹೊರಟಿದ್ದರು. ಮನೆಯಲ್ಲಿ ಪರ್ಸ್ ಮತ್ತು ಫೋನ್ ಬಿಟ್ಟು ಬಂದಿದ್ದೇನೆ ಎಂದು ನೆನಪಾಗಿ ಮತ್ತೆ ಹೋದರು. ಅದು ಮೊದಲು ಹೋಗಿ ಒಂದು ಗಂಟೆ ಕಳೆದ ನಂತರ ಬಂದಿದ್ದರು. ಮತ್ತೆ ಬಂದಾಗ ಮನೆಯ ಹೊರಗೆ ತನ್ನ ಸ್ನೇಹಿತ ಸುಂದರ್ (ಹೆಸರು ಬದಲಿಸಲಾಗಿದೆ) ನ ಬೈಕ್ ನಿಲ್ಲಿಸಿತ್ತು.
ಮನೆ ಬಾಗಿಲಿಗೆ ಬಂದು ಕಾಲಿಂಗ್ ಬೆಲ್ ಒತ್ತಿದಾಗ ಎಷ್ಟೇ ಹೊತ್ತಾದರೂ ಪತ್ನಿ ಬಾಗಿಲು ತೆಗೆಯಲಿಲ್ಲ. ಸುಮಾರು ಅರ್ಧ ಗಂಟೆ ಕಳೆದ ನಂತರ ಪತ್ನಿ ಬಾಗಿಲು ತೆಗೆದಳು. ಒಳ ಹೋಗಿ ನೋಡಿದಾಗ ಸುಂದರ್ ಅರೆನಗ್ನ ಸ್ಥಿತಿಯಲ್ಲಿದ್ದ. ಆಗಲೇ ರಮೇಶ್ ಗೆ ಕಳೆದ ಕೆಲ ಸಮಯಗಳಿಂದ ಪತ್ನಿ ಮತ್ತು ಸ್ನೇಹಿತ ಅಕ್ರಮ ಸಂಬಂಧದಲ್ಲಿದ್ದಾರೆ ಎಂದು ಗೊತ್ತಾಗಿದ್ದು. ಪ್ರಶ್ನೆ ಮಾಡಿದಾಗ ಇಬ್ಬರೂ ರಮೇಶ್ ಮೇಲೆ ಹಲ್ಲೆ ಮಾಡಲು ಆರಂಭಿಸಿದರು.
ಇದನ್ನು ಕುಟುಂಬದವರಿಗೂ ಹೇಳುತ್ತೇನೆ ಎಂದಾಗ ಇಬ್ಬರೂ ಮಕ್ಕಳನ್ನು ಕೊಂದುಬಿಡುವುದಾಗಿ ಧಮಕಿ ಹಾಕಿದರು. ಮೂವರೂ ಕಿರುಚುತ್ತಿರುವುದನ್ನು ಕೇಳಿದ ಅಕ್ಕಪಕ್ಕದ ಮನೆಯವರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿ ತಿಳಿಗೊಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com