ಉಡುಪಿ: ಬೆಂಗಳೂರು ಯಲಹಂಕದಲ್ಲಿ ನಡೆಇದ್ದ ಏರೋ ಇಂಡಿಯಾ ಏರ್ ಶೋ ವೇಳೆ ಕಾರುಗಳ ಬೆಂಕಿಗಾಹುತಿಯಾದ ಪ್ರಕರಣದಲ್ಲಿ ಕಾರು ಮಾಲೀಕರ ತೆರಿಗೆ ಮರುಪಾವತಿಗೆ ಸಂಬಂಧಿಸಿ ಲಂಚ ಪಡೆಯುತ್ತಿದ್ದ ಉಡುಪಿ ಉಪಸಾರಿಗೆ ಆಯುಕ್ತ ಹಾಗೂ ಜಿಲ್ಲಾ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ ಆರ್.ಎಂ. ವರ್ಣೇಕರ್ ಸೇರಿ ಇಬ್ಬರು ಅಧಿಕಾರಿಗಳನ್ನು ಉಡುಪಿ ಜಿಲ್ಲಾ ಭ್ರಷ್ಠಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಶನಿವಾರ ಬಂಧಿಸಿದ್ದಾರೆ.