ಕೊಪ್ಪಳ: ಪ್ರೀತಿಗಾಗಿ ಪೀಠತ್ಯಾಗ ಮಾಡಿ ಗೆಳತಿಯೊಡನೆ ಹುಟ್ಟುಹಬ್ಬ ಆಚರಿಸಿದ ಸ್ವಾಮೀಜಿ!

ಸರ್ವಸಂಗ ಪರಿತ್ಯಾಗಿಯಾಗಿ ಸನ್ಯಾಸ ಸ್ವೀಕರಿಸಿದ ಸ್ವಾಮೀಜಿಯೊಬ್ಬರು ಪ್ರೀತಿಯ ಬಲೆಗೆ ಸಿಕ್ಕು ಪೀಠತ್ಯಾಗ ಮಾಡಿದ್ದಲ್ಲದೆ ಅವರ ಗೆಳತಿಯೊಡನೆ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವ ಮೂಲಕ ಸುದ್ದಿಗೆ ಗ್ರಾವಾಗಿದ್ದಾರೆ.
ಪ್ರೀತಿಗಾಗಿ ಪೀಠತ್ಯಾಗ ಮಾಡಿ ಗೆಳತಿಯೊಡನೆ ಹುಟ್ಟುಹಬ್ಬ ಆಚರಿಸಿದ ಸ್ವಾಮೀಜಿ!
ಪ್ರೀತಿಗಾಗಿ ಪೀಠತ್ಯಾಗ ಮಾಡಿ ಗೆಳತಿಯೊಡನೆ ಹುಟ್ಟುಹಬ್ಬ ಆಚರಿಸಿದ ಸ್ವಾಮೀಜಿ!
Updated on
ಕೊಪ್ಪಳ: ಸರ್ವಸಂಗ ಪರಿತ್ಯಾಗಿಯಾಗಿ ಸನ್ಯಾಸ ಸ್ವೀಕರಿಸಿದ ಸ್ವಾಮೀಜಿಯೊಬ್ಬರು ಪ್ರೀತಿಯ ಬಲೆಗೆ ಸಿಕ್ಕು ಪೀಠತ್ಯಾಗ ಮಾಡಿದ್ದಲ್ಲದೆ ಅವರ ಗೆಳತಿಯೊಡನೆ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವ ಮೂಲಕ ಸುದ್ದಿಗೆ ಗ್ರಾವಾಗಿದ್ದಾರೆ.
ಕೊಪ್ಪಳದ ಅಳವಂಡಿ ಗ್ರಾಮದ ಸಿದ್ದೇಶ್ವರ ಮಠದ ಸಿದ್ಧಲಿಂಗ ಸ್ವಾಮೀಜಿ ಹೀಗೆ ಪ್ರೀತಿಗೆ ಬಿದ್ದು ಪೀಠತ್ಯಾಗ ಮಾಡಿದ ಸ್ವಾಮೀಜಿ. ಇವರು ಕಳೆದ ಜನವರಿಯಿಂದ ಪೀಠ ಬಿಟ್ಟಿದ್ದು ನಾಪತ್ತೆಯಾಗಿದ್ದರು. ಆದರೆ ಈಗ ತಮ್ಮ ಗೆಳತಿಯೊಡನೆ ಸೇರಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಚಿತ್ರ ಸಾಮಾಜಿಕ ತಾಣದಲ್ಲಿ ಹರಿದಾಡುತ್ತಿದೆ.
ಮುಂಡರಗಿ ಕಾಲೇಜಿನಲ್ಲಿ ಪಾಠಮಾಡಲು ತೆರಳುತ್ತಿದ್ದ ಸ್ವಾಮೀಜಿ ಅದೇ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳ ಸ್ನೇಹ ಬೆಳೆಸಿದ್ದಾರೆ. ಬಳಿಕ ಅದೇ ಸ್ನೇಹ ಪ್ರೀತಿಯಾಗಿ ಬದಲಾಗಿದೆ. ಇದಾದ ನಂತರ ಸ್ವಾಮೀಜಿ ಆ ಯುವತಿಗಾಗಿ ಪೀಠ ತ್ಯಾಗ ಮಾಡಿ ನಾಪತ್ತೆಯಾಗಿದ್ದರು. ಈ ಕುರಿತಂತೆ ಭಕ್ತರು ಪ್ರಶ್ನಿಸಲು ಮಠದ ಆಡಳಿತ ಮಂಡಳಿ "ಸ್ವಾಮೀಜಿ ವೈಯುಕ್ತಿಕ ಕಾರಣದಿಂದ ಪೀಠತ್ಯಾಗ ಮಾಡಿದ್ದಾರೆ" ಎಂದು ಹಾರಿಕೆಯ ಉತ್ತರ ನೀಡಿ ಮೌನವಾಗಿತ್ತು.
ಮೂರು ತಿಂಗಳ ಬಳಿಕ ಈಗ ಸ್ವಾಮೀಜಿ ಹಾಗೂ ಯುವತಿ ಜತೆಯಾಗಿ ಹುಟ್ಟುಹಬ್ಬದ ಕೇಕ್ ಕತ್ತರಿಸುತ್ತಿರುವ ಫೋಟೋ ಸಾಮಾಜಿಕ ತಾಣಗಳಲ್ಲಿ ಕಾಣಿಸಿಕೊಂಡಿದ್ದು ವೈರಲ್ ಆಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com