ರಾಕೇಶ್ ಸಿಂಗ್ ಅವರ ಮೇಲೆ ಬಂದ ಅಕ್ರಮಗಳ ಆರೋಪಗಳ ಹಿನ್ನೆಲೆಯಲ್ಲಿ ದೂರು ನೀಡಿರುವುದನ್ನು ಒಪ್ಪಿಕೊಂಡ ಅವರು, ಅದಕ್ಕಾಗಿಯೇ ತಮ್ಮ ವಿರುದ್ಧ ಪಿತೂರಿ ನಡೆಯುತ್ತಿದೆ. ಹೀಗಾಗಿ ರಾಕೇಶ್ ಸಿಂಗ್ ತಮ್ಮ ಯಾವುದೇ ಕೆಲಸವನ್ನು ಮಾಡಿಕೊಡುತ್ತಿಲ್ಲ. ಅವರ ವಿರುದ್ದ ಮಾತಾಡಿದ್ದರಿಂದ ತಮ್ಮನ್ನು ನಿರ್ಲಕ್ಷಿಸುತ್ತಿದ್ದಾರೆ. ಹಾಗೆಂದು ತಾವು ಬಿಡಿಎ ಆಯುಕ್ತರ ವರ್ಗಾವಣೆ ಗೆ ಒತ್ತಡ ಹೇರಿಲ್ಲ, ಬದಲಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಖಾಯಂ ಆಯುಕ್ತರನ್ನು ನೇಮಿಸಿ ಎಂದು ಮನವಿ ಮಾಡಿರುವುದಾಗಿ ಸ್ಪಷ್ಟಪಡಿಸಿದರು.