ಪರೀಕ್ಷೆ ಆರಂಭವಾದ ನಂತರ ವಾಟ್ಸಾಪ್ ನಲ್ಲಿ ಹರಿದಾಡಿದ 10ನೇ ತರಗತಿ ಗಣಿತ ಪ್ರಶ್ನೆ ಪತ್ರಿಕೆ; ಮರು ಪರೀಕ್ಷೆಯಿಲ್ಲ ಎಂದ ಇಲಾಖೆ

ಈ ಬಾರಿಯ ಎಸ್ಎಸ್ಎಲ್ ಸಿ ಗಣಿತ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂದು ಹೇಳಿ ಫೋಟೋವೊಂದು ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ವಿಜಯಪುರ: ಈ ಬಾರಿಯ ಎಸ್ಎಸ್ಎಲ್ ಸಿ ಗಣಿತ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂದು ಹೇಳಿ ಫೋಟೋವೊಂದು ವಾಟ್ಸಾಪ್ ಸಂದೇಶದಲ್ಲಿ ಹರಿದಾಡುತ್ತಿತ್ತು. ಈ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ವಾಟ್ಸಾಪ್ ಸಂದೇಶ ನೋಡಿ ಇದು ಮೂಲ ಪ್ರಶ್ನೆಪತ್ರಿಕೆಯಾಗಿದೆ ಎಂದು ಖಚಿತಪಡಿಸಿದ್ದಾರೆ.
ನಿನ್ನೆ ಹತ್ತನೇ ತರಗತಿಯ ಗಣಿತ ಪರೀಕ್ಷೆಯಿದ್ದು ಪರೀಕ್ಷೆ ಆರಂಭವಾದ ನಂತರ ಪ್ರಶ್ನೆಪತ್ರಿಕೆ ವಾಟ್ಸಾಪ್ ನಲ್ಲಿ ಹರಿದಾಡಿ ವೈರಲ್ ಆಗಿತ್ತು. ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೇ ಬೆಳಗ್ಗೆ 11 ಗಂಟೆ ವೇಳೆಗೆ ಯಾವುದೋ ಅನಾಮಧೇಯ ಸಂಖ್ಯೆಯಿಂದ ಈ ಸಂದೇಶ ಬಂದಿದೆ. ವಾಟ್ಸಾಪ್ ನಲ್ಲಿ ಬಂದ ಫೋಟೋವನ್ನು ಮೂಲ ಪ್ರಶ್ನೆಪತ್ರಿಕೆಯ ಜೊತೆ ತಾಳೆ ಮಾಡಿ ನೋಡಿದಾಗ ಅದೇ ಪ್ರಶ್ನೆಗಳಿವೆ ಎಂದು ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪ್ರಸನ್ನ ಕುಮಾರ್ ತಿಳಿಸಿದ್ದಾರೆ.
ಇದರ ಮೂಲ ಹುಡುಕಿದಾಗ ಪ್ರಶ್ನೆ ಪತ್ರಿಕೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಮೊರಟಗಿಯಿಂದ ಬಹಿರಂಗವಾಗಿದೆ ಎಂದು ತಿಳಿದುಬಂದಿದೆ.
ಮಾರ್ಚ್ 21ರಂದು ಆರಂಭವಾದ ಎಸ್ಎಸ್ ಎಲ್ ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ನಿನ್ನೆ ಗಣಿತ ಪರೀಕ್ಷೆಯಿತ್ತು. ಪ್ರಶ್ನೆಪತ್ರಿಕೆ ಹೇಗೆ ಸೋರಿಕೆಯಾಯಿತು ಎಂದು ಅಧಿಕಾರಿಗಳು ಪೊಲೀಸರಿಗೆ ದೂರು ನೀಡಲು ಮುಂದಾಗಿದ್ದಾರೆ. ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಿದ್ದು ತನಿಖೆ ನಡೆಯಲಿದೆ.ಮೊರಟಗಿಯ ಕಲ್ಪರುಕ್ಷ ಶೈಕ್ಷಣಿಕ ಸಂಸ್ಥೆಯಲ್ಲಿ ಸೋರಿಕೆಯಾಗಿದೆ ಎಂದು ನೋಡಲ್ ಅಧಿಕಾರಿ ನನಗೆ ತಿಳಿಸಿದ್ದಾರೆ ಎಂದು ಪ್ರಸನ್ನ ಕುಮಾರ್ ಹೇಳಿದ್ದಾರೆ. ವಿಜಯಪುರದ ಕಲ್ಪರುಕ್ಷದ ಸೂಪರಿಂಟೆಂಡೆಂಟ್ ಅವರನ್ನು ವಜಾ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com