ಕೆ.ಆರ್.ಮಾರುಕಟ್ಟೆಯಲ್ಲಿ ನಿಯಮಬಾಹಿರವಾಗಿ ಹಲವು ಕಟ್ಟಡಗಳು ತಲೆಎತ್ತಿದ್ದು, ಅಗ್ನಿ ಅವಘಡದಂತಹ ದುರಂತಗಳು ಸಂಭವಿಸಿದಲ್ಲಿ, ಜನರಿಗೆ ನಿರ್ಗಮಿಸಲು ಹಾಗೂ ಅಗ್ನಿ ಶಾಮಕ ದಳದ ವಾಹನಗಳ ಸಂಚಾರಕ್ಕೆ ಅವಕಾಶವಿಲ್ಲ. ಮಾರುಕಟ್ಟೆ ಸಂರ್ಕೀಣದ ಸಾರ್ವಜನಿಕ ಪಡಸಾಲೆ ಮತ್ತು ತುರ್ತು ನಿರ್ಗಮನ ಜಾಗಗಲ್ಲಿ ತಳಮಹಡಿಯ ನಂತರದ ಅಂತಸ್ತಿನಲ್ಲಿ 24 ಹಾಗೂ ಮೊದಲ ಅಂತಸ್ತಿನಲ್ಲಿ 53 ಮಳಿಗೆಗಳನ್ನು ಅಕ್ರಮವಾಗಿ ನಿರ್ಮಿಸಲಾಗಿದ್ದು, ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿಲ್ಲ. ಈವರೆಗೂ ಅಲ್ಲಿ 95ಕ್ಕೂ ಅಧಿಕ ಅಗ್ನಿ ಅವಘಡಗಳು ಸಂಭವಿಸಿವೆ. ನ್ಯಾಯಾಲಯದಲ್ಲಿ ಪ್ರಕರಣ ವಿಚಾರಣಾ ಹಂತದಲ್ಲಿರುವಾಗಲೇ 53 ಮಳಿಗೆಗಳನ್ನು ನಿರ್ಮಿಸಲಾಗಿದೆ. ಈ ಕಟ್ಟಡಗಳ ತೆರವಿಗೆ ಹಾಗೂ ಅಸ್ತಿತ್ವದಲ್ಲಿರುವ ಕಟ್ಟಡಗಳು ಅಗ್ನಿ ಶಾಮಕ ದಳದಿಂದ ನಿರಾಕ್ಷೇಪಣಾ ಪತ್ರ ಪಡೆಯುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸುವಂತೆ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.